ಸುಳ್ಯ: ತಾಲೂಕಿನಲ್ಲಿ ಇದುವರೆಗೆ ಯಾವುದೇ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿಲ್ಲ. ಆದರೆ ಇದೇ ರೀತಿಯಾಗಿ ಮುಂಜಾಗ್ರತಾ ಕ್ರಮಗಳು ಇನ್ನೂ 15 ದಿನಗಳ ಕಾಲ ಅಗತ್ಯವಿದೆ. ಅನಗತ್ಯವಾಗಿ ಸುಳ್ಳು ಸುದ್ದಿ ಹಾಗು ವದಂತಿ ಹಬ್ಬಿಸಬೇಡಿ. ಭಯದ ಬದಲಾಗಿ ಜಾಗೃತಿ ಇರಲಿ ಎಂದು ಆರೋಗ್ಯ ಇಲಾಖೆ ಹಾಗೂ ತಾಲೂಕು ಆಡಳಿತ ಹೇಳಿದೆ.
ವಿದೇಶದಿಂದ ಬಂದವರನ್ನು ಈಗಾಗಲೆ ಕ್ವಾರಂಟೇನ್ ನಲ್ಲಿ ಇರಲು ಸೂಚಿಸಿದೆ. ವಿದೇಶದಿಂದ ಬಂದು ಅನಾರೋಗ್ಯಕ್ಕೆ ಒಳಗಾದವರ ರಕ್ತದ ಸ್ಯಾಂಪಲ್ ತಪಾಸಣೆಗೆ ಕಳುಹಿಸಲಾಗಿದೆ. ಇದುವರಗೆ ಕೊರೊನಾ ವೈರಸ್ ಪಾಸಿಟಿವ್ ಬರಲಿಲ್ಲ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ತಾಲೂಕಿನಲ್ಲಿ ಮುಂಜಾಗ್ರತಾ ಕ್ರಮಗಳನ್ನು ಇದೇ ರೀತಿ ಮುಂದುವರಿಸಿಕೊಂಡು ಕಡ್ಡಾಯವಾಗಿ ಹೊಗಬೇಕಿದೆ. ವಿದೇಶದಿಂದ ಹಾಗೂ ಹೊರಜಿಲ್ಲೆಗಳಿಂದ ಬಂದವರಿಗೆ ಯಾರಿಗಾದರೂ ಜ್ವರ, ಶೀತ, ಕಫ ಇದ್ದರೆ ತಕ್ಷಣವೇ ಸಮೀಪದ ಆಸ್ಪತ್ರೆಗೆ ಯಾವುದೇ ಭಯವಿಲ್ಲದೆ ಭೇಟಿ ನೀಡಬೇಕಿದೆ. ಸ್ಥಳೀಯರು ಈ ಬಗ್ಗೆ ನಿಗಾ ಇಡಬೇಕಿದೆ.
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…
ಅಳಿವಿನಂಚಿನಲ್ಲಿದ್ದ ಕೇರಳದ ಪೆರಿಯಾರ್ ಕುಳ್ಳನ್ ಹಸುವಿಗೆ ಭಾರತೀಯ ಕೃಷಿ ಸಂಶೋಧನಾ ಮಂಡಳಿಯ ರಾಷ್ಟ್ರೀಯ…
ರಾಜ್ಯದ ಗ್ರಾಮೀಣ ಪ್ರದೇಶಗಳಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನೇ ಪ್ರತಿಷ್ಠಾಪಿಸಿ ಗಣೇಶೋತ್ಸವ ಆಚರಿಸುವಂತೆ…