ಸುದ್ದಿಗಳು

ಕೊರೊನಾ ತೊಲಗಿಸಿ-ರೈತರನ್ನು ಉಳಿಸಿ | ರೈತ ಸಂಘದಿಂದ ಪ್ರತಿಭಟನೆ | ಮನೆ ಮನೆಗಳಲ್ಲೇ ನಡೆಯುತ್ತಿರುವ ಮೌನ ಪ್ರತಿಭಟನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಪುತ್ತೂರು: ಕೊರೊನಾ ತೊಲಗಿಸಿ-ರೈತರನ್ನು ಉಳಿಸಿ ಸತ್ಯಾಗ್ರಹದ ನಿಟ್ಟಿನಲ್ಲಿ ರೈತ ಸಂಘದ ವತಿಯಿಂದ ಮನೆ ಮನೆಗಳಲ್ಲಿ ರೈತ ಸಂಘದ ವತಿಯಿಂದ ಸೋಮವಾರ ಮೌನ ಪ್ರತಿಭಟನೆ ನಡೆಯುತ್ತಿದೆ.

Advertisement
Advertisement

ರೈತರು ಹಾಗೂ ಗ್ರಾಮೀಣ ಪ್ರದೇಶದ ಜನತೆ ಮನೆಗಳಲ್ಲಿಯೇ ಇದ್ದು , ಯಾವುದೇ ದಿನಬಳಕೆಯ ವಸ್ತುಗಳ ಖರೀದಿ ಮಾಡದೇ,  ಯಾವುದೇ ಕೃಷಿ ಉತ್ಪನ್ನ ಗಳನ್ನು ಮಾರುಕಟ್ಟೆಗೆ ಒಯ್ಯದೇ ತಮ್ಮ ಮನೆ ಮಂದಿಯೊಂದಿಗೆ ಮನೆಯಲ್ಲಿಯೇ ಧರಣಿ ಆರಂಭ ಮಾಡಿದ್ದಾರೆ. ರೈತರ ಜೀವವೂ ಉಳಿಯಲಿ, ಜೀವನವೂ ಉಳಿಯಲಿ, ಮಾರುಕಟ್ಟೆ ಮುಕ್ತವಾಗಿರಲಿ , ಬೆಳೆಗಳಿಗೆ ಬೆಲೆ ಬರಲಿ , ಕೃಷಿ ಉತ್ಪನ್ನಗಳ ಆಮದು ನಿಲ್ಲಲಿ, ಬೆಳೆಗಳಿಗೆ ಬೆಲೆ ಬರಲಿ ಎಂಬ ಉದ್ದೇಶದಿಂದ ಧರಣಿ ನಡೆಯುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ,  ಲಾಕ್ಡೌನ್ ನಿಂದಾಗಿ ಕೃಷಿಕ್ಷೇತ್ರಕ್ಕೆ ರಾಜ್ಯದಲ್ಲಿ ಸಮಸ್ಯೆಯಾಗಿದೆ.  ಫರಂಗಿ ಹಣ್ಣು,ಬಾಳೆ,ಕಲ್ಲಂಗಡಿ,ಕರಬುಜ, ಹೂವು ಹಣ್ಣು, ತರಕಾರಿ ಅಲಿಕಲ್ಲು ಮಳೆಯಿಂದಾಗಿ ಭತ್ತದ ಬೆಳೆ ಸುಮಾರು 1 ಲಕ್ಷ ಕೋಟಿಗಿಂತಲೂ ಹೆಚ್ಚು ಫಸಲು ನಷ್ಠ ಅಲ್ಲದೇ ತೋಟಗಾರಿಕೆ ಮತ್ತು ಪ್ಲಾಂಟೇಶನ್ ಬೆಳೆಗಳಾದ ಅಡಿಕೆ,ಕಾಫಿ ,ಟೀ ,ರಬ್ಬರ್ ಬೆಳೆಗಳ ಮಾರುಕಟ್ಟೆ ಕುಸಿತ ಮತ್ತು ಖರೀದಿಯಲ್ಲಿನ ಗೊಂದಲದಿಂದ ಕೃಷಿ ಕ್ಷೇತ್ರ ದಿಕ್ಕೆಟ್ಟಿದೆ. ಮುಂದಿನ ದಿನಗಳಲ್ಲಿ ಆಹಾರ ಸುಭದ್ರತೆಗಾಗಿ ಕೃಷಿ ಕ್ಷೇತ್ರದ ರಕ್ಷಣೆಗಾಗಿ ವಿಷೇಶ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ರಾಶಿಯಲ್ಲಿ 3 ಗ್ರಹ…..| ತ್ರಿಗ್ರಾಹಿ ಯೋಗವು 50 ವರ್ಷಗಳ ನಂತರ ಸಂಭವಿಸುತ್ತಿದೆ | 5 ರಾಶಿಯವರಿಗೆ ಬಂಪರ್‌ ಲಾಟರಿ..!

ಜೂನ್ 2025ರಲ್ಲಿ ಮಿಥುನ ರಾಶಿಯಲ್ಲಿ ಸೂರ್ಯ, ಬುಧ ಮತ್ತು ಗುರು ಗ್ರಹಗಳ ತ್ರಿಗ್ರಾಹಿ…

3 hours ago

ಕೋಲಾರ ಜಿಲ್ಲೆಯಲ್ಲಿ ನಾಳೆ ಮಾವು ಬೆಳೆಗಾರರಿಂದ ಬಂದ್ ಕರೆ |

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ಎ.ಪಿ.ಎಂ.ಸಿ ಮಾರುಕಟ್ಟೆಯಲ್ಲಿ ಪ್ರತಿನಿತ್ಯ ಅಂದಾಜು 800 ರಿಂದ 900…

12 hours ago

ಕೃಷಿ ಜೊತೆಗೆ ತೋಟಗಾರಿಕಾ ಬೆಳೆಗಳಿಗೆ ಆದ್ಯತೆ ನೀಡಿ

ದೇಶದ ಆರ್ಥಿಕತೆಯಲ್ಲಿ ತೋಟಗಾರಿಕೆಯಿಂದ ಹೆಚ್ಚಿನ ಜಿಡಿಪಿ ಬರುತ್ತಿದ್ದು, ಹೂ ಮತ್ತು ಔಷಧಿ ಸಸ್ಯಗಳಿಗೆ…

13 hours ago

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

13 hours ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

13 hours ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

13 hours ago