Advertisement
ಸುದ್ದಿಗಳು

ಕೊರೊನಾ ತೊಲಗಿಸಿ-ರೈತರನ್ನು ಉಳಿಸಿ | ರೈತ ಸಂಘದಿಂದ ಪ್ರತಿಭಟನೆ | ಮನೆ ಮನೆಗಳಲ್ಲೇ ನಡೆಯುತ್ತಿರುವ ಮೌನ ಪ್ರತಿಭಟನೆ |

Share

ಪುತ್ತೂರು: ಕೊರೊನಾ ತೊಲಗಿಸಿ-ರೈತರನ್ನು ಉಳಿಸಿ ಸತ್ಯಾಗ್ರಹದ ನಿಟ್ಟಿನಲ್ಲಿ ರೈತ ಸಂಘದ ವತಿಯಿಂದ ಮನೆ ಮನೆಗಳಲ್ಲಿ ರೈತ ಸಂಘದ ವತಿಯಿಂದ ಸೋಮವಾರ ಮೌನ ಪ್ರತಿಭಟನೆ ನಡೆಯುತ್ತಿದೆ.

ರೈತರು ಹಾಗೂ ಗ್ರಾಮೀಣ ಪ್ರದೇಶದ ಜನತೆ ಮನೆಗಳಲ್ಲಿಯೇ ಇದ್ದು , ಯಾವುದೇ ದಿನಬಳಕೆಯ ವಸ್ತುಗಳ ಖರೀದಿ ಮಾಡದೇ,  ಯಾವುದೇ ಕೃಷಿ ಉತ್ಪನ್ನ ಗಳನ್ನು ಮಾರುಕಟ್ಟೆಗೆ ಒಯ್ಯದೇ ತಮ್ಮ ಮನೆ ಮಂದಿಯೊಂದಿಗೆ ಮನೆಯಲ್ಲಿಯೇ ಧರಣಿ ಆರಂಭ ಮಾಡಿದ್ದಾರೆ. ರೈತರ ಜೀವವೂ ಉಳಿಯಲಿ, ಜೀವನವೂ ಉಳಿಯಲಿ, ಮಾರುಕಟ್ಟೆ ಮುಕ್ತವಾಗಿರಲಿ , ಬೆಳೆಗಳಿಗೆ ಬೆಲೆ ಬರಲಿ , ಕೃಷಿ ಉತ್ಪನ್ನಗಳ ಆಮದು ನಿಲ್ಲಲಿ, ಬೆಳೆಗಳಿಗೆ ಬೆಲೆ ಬರಲಿ ಎಂಬ ಉದ್ದೇಶದಿಂದ ಧರಣಿ ನಡೆಯುತ್ತಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ,  ಲಾಕ್ಡೌನ್ ನಿಂದಾಗಿ ಕೃಷಿಕ್ಷೇತ್ರಕ್ಕೆ ರಾಜ್ಯದಲ್ಲಿ ಸಮಸ್ಯೆಯಾಗಿದೆ.  ಫರಂಗಿ ಹಣ್ಣು,ಬಾಳೆ,ಕಲ್ಲಂಗಡಿ,ಕರಬುಜ, ಹೂವು ಹಣ್ಣು, ತರಕಾರಿ ಅಲಿಕಲ್ಲು ಮಳೆಯಿಂದಾಗಿ ಭತ್ತದ ಬೆಳೆ ಸುಮಾರು 1 ಲಕ್ಷ ಕೋಟಿಗಿಂತಲೂ ಹೆಚ್ಚು ಫಸಲು ನಷ್ಠ ಅಲ್ಲದೇ ತೋಟಗಾರಿಕೆ ಮತ್ತು ಪ್ಲಾಂಟೇಶನ್ ಬೆಳೆಗಳಾದ ಅಡಿಕೆ,ಕಾಫಿ ,ಟೀ ,ರಬ್ಬರ್ ಬೆಳೆಗಳ ಮಾರುಕಟ್ಟೆ ಕುಸಿತ ಮತ್ತು ಖರೀದಿಯಲ್ಲಿನ ಗೊಂದಲದಿಂದ ಕೃಷಿ ಕ್ಷೇತ್ರ ದಿಕ್ಕೆಟ್ಟಿದೆ. ಮುಂದಿನ ದಿನಗಳಲ್ಲಿ ಆಹಾರ ಸುಭದ್ರತೆಗಾಗಿ ಕೃಷಿ ಕ್ಷೇತ್ರದ ರಕ್ಷಣೆಗಾಗಿ ವಿಷೇಶ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

3 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

3 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

11 hours ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

21 hours ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

1 day ago