ಪುತ್ತೂರು: ಕೊರೊನಾ ತೊಲಗಿಸಿ-ರೈತರನ್ನು ಉಳಿಸಿ ಸತ್ಯಾಗ್ರಹದ ನಿಟ್ಟಿನಲ್ಲಿ ರೈತ ಸಂಘದ ವತಿಯಿಂದ ಮನೆ ಮನೆಗಳಲ್ಲಿ ರೈತ ಸಂಘದ ವತಿಯಿಂದ ಸೋಮವಾರ ಮೌನ ಪ್ರತಿಭಟನೆ ನಡೆಯುತ್ತಿದೆ.
ರೈತರು ಹಾಗೂ ಗ್ರಾಮೀಣ ಪ್ರದೇಶದ ಜನತೆ ಮನೆಗಳಲ್ಲಿಯೇ ಇದ್ದು , ಯಾವುದೇ ದಿನಬಳಕೆಯ ವಸ್ತುಗಳ ಖರೀದಿ ಮಾಡದೇ, ಯಾವುದೇ ಕೃಷಿ ಉತ್ಪನ್ನ ಗಳನ್ನು ಮಾರುಕಟ್ಟೆಗೆ ಒಯ್ಯದೇ ತಮ್ಮ ಮನೆ ಮಂದಿಯೊಂದಿಗೆ ಮನೆಯಲ್ಲಿಯೇ ಧರಣಿ ಆರಂಭ ಮಾಡಿದ್ದಾರೆ. ರೈತರ ಜೀವವೂ ಉಳಿಯಲಿ, ಜೀವನವೂ ಉಳಿಯಲಿ, ಮಾರುಕಟ್ಟೆ ಮುಕ್ತವಾಗಿರಲಿ , ಬೆಳೆಗಳಿಗೆ ಬೆಲೆ ಬರಲಿ , ಕೃಷಿ ಉತ್ಪನ್ನಗಳ ಆಮದು ನಿಲ್ಲಲಿ, ಬೆಳೆಗಳಿಗೆ ಬೆಲೆ ಬರಲಿ ಎಂಬ ಉದ್ದೇಶದಿಂದ ಧರಣಿ ನಡೆಯುತ್ತಿದೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರೈತ ಸಂಘದ ರಾಜ್ಯ ಕಾರ್ಯದರ್ಶಿ ರವಿಕಿರಣ ಪುಣಚ, ಲಾಕ್ಡೌನ್ ನಿಂದಾಗಿ ಕೃಷಿಕ್ಷೇತ್ರಕ್ಕೆ ರಾಜ್ಯದಲ್ಲಿ ಸಮಸ್ಯೆಯಾಗಿದೆ. ಫರಂಗಿ ಹಣ್ಣು,ಬಾಳೆ,ಕಲ್ಲಂಗಡಿ,ಕರಬುಜ, ಹೂವು ಹಣ್ಣು, ತರಕಾರಿ ಅಲಿಕಲ್ಲು ಮಳೆಯಿಂದಾಗಿ ಭತ್ತದ ಬೆಳೆ ಸುಮಾರು 1 ಲಕ್ಷ ಕೋಟಿಗಿಂತಲೂ ಹೆಚ್ಚು ಫಸಲು ನಷ್ಠ ಅಲ್ಲದೇ ತೋಟಗಾರಿಕೆ ಮತ್ತು ಪ್ಲಾಂಟೇಶನ್ ಬೆಳೆಗಳಾದ ಅಡಿಕೆ,ಕಾಫಿ ,ಟೀ ,ರಬ್ಬರ್ ಬೆಳೆಗಳ ಮಾರುಕಟ್ಟೆ ಕುಸಿತ ಮತ್ತು ಖರೀದಿಯಲ್ಲಿನ ಗೊಂದಲದಿಂದ ಕೃಷಿ ಕ್ಷೇತ್ರ ದಿಕ್ಕೆಟ್ಟಿದೆ. ಮುಂದಿನ ದಿನಗಳಲ್ಲಿ ಆಹಾರ ಸುಭದ್ರತೆಗಾಗಿ ಕೃಷಿ ಕ್ಷೇತ್ರದ ರಕ್ಷಣೆಗಾಗಿ ವಿಷೇಶ ಪ್ಯಾಕೇಜ್ ಘೋಷಣೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…