ಮಂಗಳೂರು: ಕೊರೊನಾ ವೈರಸ್ ಹರಡುವುದು ತಡೆಯಲು ಸತತ ಪ್ರಯತ್ನ ನಡೆಯುತ್ತಿದೆ. ಈ ಸಂದರ್ಭ ಜಿಲ್ಲಾಡಳಿತದ ಜೊತೆ ಕೈ ಜೋಡಿಸಬೇಕಾದ್ದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಈ ಹಂತದಲ್ಲಿ ಜನರನ್ನು ಭಯಗೊಳಿಸುವ ವಿಡಿಯೋವನ್ನು ಸಾಮಾಜಿಕ ಜಾಲತಾಣ, ವಾಟ್ಸಪ್ ಗ್ರೂಪುಗಳ ಮೂಲಕ ಹರಡಿದರೆ ಕೇಸು ದಾಖಲಾಗಲಿದೆ. ಹೀಗಾಗಿ ವಿಡಿಯೋಗಳನ್ನು ವೈರಲ್ ಮಾಡುವ ಮುನ್ನ ಎಚ್ಚರಿಕೆ ವಹಿಸುವುದು ಒಳಿತು.
ಮಂಗಳೂರಿನಲ್ಲಿ ಕೊರೊನಾ ವೈರಸ್ ಸೋಂಕು ಪ್ರಕರಣ ಪತ್ತೆಯಾದ ಬೆನ್ನಲ್ಲೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಇಂತಹ ವಿಡಿಯೋ ವೈರಲ್ ಮಾಡುವ ಮೂಲಕ ಜನರನ್ನು ಇನ್ನಷ್ಟು ಆತಂಕಕ್ಕೆ ಹಾಗೂ ಭಯಕ್ಕೆ ತಳ್ಳುವ ಸಾಧ್ಯತೆ ಇದೆ. ಹೀಗಾಗಿ ಈ ರೀತಿ ವದಂತಿ, ಅಪಪ್ರಚಾರ ಮಾಡುವುದರ ಬಗ್ಗೆ ಸಂಬಂಧಿತ ಅಧಿಕಾರಿಗಳು ಪೊಲೀಸ್ ದೂರು ನೀಡಲಿದ್ದಾರೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…