ಕೊರೊನಾ ವೈರಸ್ ಹರಡುವುದು ತಡೆಗೆ ಕೇಂದ್ರ ಸರಕಾರ ಎ.14 ರ ವರೆಗೆ ಲಾಕ್ ಡೌನ್ ಘೋಷಿಸಿದೆ. ಇದೀಗ ಕೇಂದ್ರ ಸರಕಾರದಿಂದ ಮಹತ್ವದ ನಿರ್ಧಾರ ಪ್ರಕಟ ಮಾಡಿದ್ದು ದೇಶದ 80 ಕೋಟಿ ಜನರಿಗೆ ಪಡಿತರ ನೀಡಲಾಗುತ್ತದೆ ಎಂದು ಕೇಂದ್ರ ಸರಕಾರ ಘೋಷಣೆ ಮಾಡಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ ಪ್ರಕಾಶ್ ಜಾವೇಡ್ಕರ್, ದೇಶದ 80 ಕೋಟಿ ಜನರಿಗೆ ಪಡಿತರ ವ್ಯವಸ್ಥೆ ಜಾರಿ ಮಾಡಲಾಗುತ್ತದೆ. 3 ತಿಂಗಳಿಗೆ ಬೇಕಾಗುವಷ್ಟು ಪಡಿತರ ನೀಡಲಾಗುತ್ತದೆ. ಸಹಕಾರಿ ಸಂಘಗಳಿಗೆ ಇದಕ್ಕಾಗಿ ಫಂಡ್ ನೀಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ. ಗೋಧಿ್ಗೆ 2 ರೂಪಾಯಿ ಹಾಗೂ ಅಕ್ಕಿಗೆ 3 ರೂಪಾಯಿಗೆ ವಿತರಣೆ ಮಾಡಲಾಗುತ್ತದೆ. ಗುತ್ತಿಗೆ ಕಾರ್ಮಿಕರಿಗೆ ವೇತನ ಕಡಿತ ಮಾಡಬಾರದು ಎಂದು ಹೇಳಿದ್ದಾರೆ. ಈ ಸಂದರ್ಭ ಕಾಳಸಂತೆಯಲ್ಲಿ ದಿನಸಿ ವಸ್ತುಗಳನ್ನು ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಹಣ ಪಡೆಯಲು ಯಾವುದೇ ಅಡ್ಡಿ ಇಲ್ಲ. ಎಟಿಎಂ ಮೂಲಕ ಪಡೆಯಬಹುದಾಗಿದೆ. ಇದಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ. ತುರ್ತು ಕೆಲಸ ಇದ್ದರೆ ಮಾತ್ರವೇ ಪೇಟೆಗೆ, ಬ್ಯಾಂಕ್ ಗೆ ತೆರಳಿ ಎಂದು ಸರಕಾರ ಹೇಳಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…