ಕೊರೊನಾ ವೈರಸ್ ಹರಡುವುದು ತಡೆಗೆ ಕೇಂದ್ರ ಸರಕಾರ ಎ.14 ರ ವರೆಗೆ ಲಾಕ್ ಡೌನ್ ಘೋಷಿಸಿದೆ. ಇದೀಗ ಕೇಂದ್ರ ಸರಕಾರದಿಂದ ಮಹತ್ವದ ನಿರ್ಧಾರ ಪ್ರಕಟ ಮಾಡಿದ್ದು ದೇಶದ 80 ಕೋಟಿ ಜನರಿಗೆ ಪಡಿತರ ನೀಡಲಾಗುತ್ತದೆ ಎಂದು ಕೇಂದ್ರ ಸರಕಾರ ಘೋಷಣೆ ಮಾಡಿದೆ.
ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಸಚಿವ ಪ್ರಕಾಶ್ ಜಾವೇಡ್ಕರ್, ದೇಶದ 80 ಕೋಟಿ ಜನರಿಗೆ ಪಡಿತರ ವ್ಯವಸ್ಥೆ ಜಾರಿ ಮಾಡಲಾಗುತ್ತದೆ. 3 ತಿಂಗಳಿಗೆ ಬೇಕಾಗುವಷ್ಟು ಪಡಿತರ ನೀಡಲಾಗುತ್ತದೆ. ಸಹಕಾರಿ ಸಂಘಗಳಿಗೆ ಇದಕ್ಕಾಗಿ ಫಂಡ್ ನೀಡಲಾಗುತ್ತದೆ ಎಂದು ಘೋಷಣೆ ಮಾಡಲಾಗಿದೆ. ಗೋಧಿ್ಗೆ 2 ರೂಪಾಯಿ ಹಾಗೂ ಅಕ್ಕಿಗೆ 3 ರೂಪಾಯಿಗೆ ವಿತರಣೆ ಮಾಡಲಾಗುತ್ತದೆ. ಗುತ್ತಿಗೆ ಕಾರ್ಮಿಕರಿಗೆ ವೇತನ ಕಡಿತ ಮಾಡಬಾರದು ಎಂದು ಹೇಳಿದ್ದಾರೆ. ಈ ಸಂದರ್ಭ ಕಾಳಸಂತೆಯಲ್ಲಿ ದಿನಸಿ ವಸ್ತುಗಳನ್ನು ಮಾರಾಟ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಹಣ ಪಡೆಯಲು ಯಾವುದೇ ಅಡ್ಡಿ ಇಲ್ಲ. ಎಟಿಎಂ ಮೂಲಕ ಪಡೆಯಬಹುದಾಗಿದೆ. ಇದಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ. ತುರ್ತು ಕೆಲಸ ಇದ್ದರೆ ಮಾತ್ರವೇ ಪೇಟೆಗೆ, ಬ್ಯಾಂಕ್ ಗೆ ತೆರಳಿ ಎಂದು ಸರಕಾರ ಹೇಳಿದೆ.
ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…
ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್…
ನೂರಾರು ಕೋಟಿ ರೂಪಾಯಿ ಖರ್ಚು ಮಾಡಿ ಮಲೆನಾಡಿನ ಗ್ರಾಮೀಣ ಭಾಗಕ್ಕೂ ಶುದ್ಧವಾಗಿರುವ ಕುಡಿಯುವ…
ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ ಸುಮಾರು 250…
ರಾಜ್ಯದ ಕಾಡಂಚಿನ ಪ್ರದೇಶದಲ್ಲಿ ಮಾನವ ಮತ್ತು ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…