Advertisement
ಸುದ್ದಿಗಳು

ಕೊರೊನಾ ಮುಗಿದ ಬಳಿಕ ಸುಳ್ಯ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಮಾತುಕತೆ – ಶಾಸಕ ಅಂಗಾರ

Share

ಸುಳ್ಯ: ಸುಳ್ಯದ 110 ಕೆ.ವಿ. ವಿದ್ಯುತ್ ವಿತರಣಾ ಕಾಮಗಾರಿಯ ವಿದ್ಯುತ್ ಲೈನ್ ಅರಣ್ಯ ಭೂಮಿ ಮಂಜೂರಾತಿಯ ವಿಚಾರ ಮುಖ್ಯಮಂತ್ರಿಗಳಲ್ಲಿ ಪೆಂಡಿಂಗ್ ಇದೆ. ಕೊರೊನಾ ಲಾಕ್ಡೌನ್  ಮುಗಿದ ಕೂಡಲೇ ಆ ಬಗ್ಗೆ ಮತ್ತೊಮ್ಮೆ ನೆನಪಿಸಿ ಅರಣ್ಯ ಭೂಮಿ ಮಂಜೂರಾಗುವಂತೆ ಮಾಡುತ್ತೇವೆ  ಎಂದು ಶಾಸಕ ಅಂಗಾರ ಹೇಳಿದ್ದಾರೆ.

ಸುಳ್ಯ ನಿರೀಕ್ಷಣಾ ಮಂದಿರದಲ್ಲಿ ಪತ್ರಿಕಾಗೋಷ್ಠಿಯಲ್ಲಿ  ಅವರು ಮಾತನಾಡಿದರು. ಸುಳ್ಯದ 110 ಕೆವಿ ವಿದ್ಯುತ್ ಸಬ್ ಸ್ಟೇಶನ್ ಬಗ್ಗೆ ಪತ್ರಕರ್ತರು ಗಮನ ಸೆಳೆದಾಗ ಕೊರೊನಾ ಲಾಕ್ಡೌನ್ ಮುಗಿದ ಬಳಿಕ ಈ ಬಗ್ಗೆ ಚರ್ಚೆ ನಡೆಸಲಿದ್ದೇವೆ ಎಂದರು. ತಾಲೂಕಿನಲ್ಲಿ ವಿದ್ಯುತ್ ಬಿಲ್ ಹೆಚ್ಚು ಬಂದಿರುವ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ಇದೇ ವೇಳೆ ಹೇಳಿದರು.

ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ  ಸಂಕಷ್ಟಕ್ಕೊಳಗಾಗದಂತೆ ಕ್ರಮ ಕೈಗೊಂಡ ಕೇಂದ್ರ ಸರಕಾರ ಮತ್ತು ರಾಜ್ಯ ಸರಕಾರಗಳಿಗೆ ಕೃತಜ್ಞತೆ ಸಲ್ಲಿಸಿದ ಅಂಗಾರ ಅವರು ಪ್ರಧಾನಿ ನರೇಂದ್ರ ಮೋದಿಯವರು ಕೇಂದ್ರ ಸರಕಾರದ ವತಿಯಿಂದ ಘೋಷಿಸಿರುವ 20 ಲಕ್ಷ ಕೋಟಿ ರೂ.ಗಳು ಜನರಿಗೆ ಯಾವ ರೀತಿ ಸಿಗಲಿದೆ ಎಂಬುದು ವಿತ್ತ ಸಚಿವರು ವಿವರಣೆ ನೀಡುವುದು ಪೂರ್ಣಗೊಂಡ ಕೂಡಲೇ ಗೊತ್ತಾಗಲಿದೆ ಎಂದು   ತಿಳಿಸಿದರು.

ಕೇಂದ್ರದ 20 ಲಕ್ಷ ಕೋಟಿ ಸಣ್ಣ ಉದ್ದಿಮೆದಾರರಿಗೆ ಸಾಲ ಕೊಡಲು, ಆದ್ಯತಾ ವಲಯಗಳ ಚೇತರಿಕೆಗೆ ಸಹಾಯ ಮಾಡಲು ಕಾರ್ಯಕ್ರಮ ರೂಪಿಸಲಾಗಿದೆ. ಎಲ್ಲೂ ಜನರಿಗೆ ನೇರವಾಗಿ ಕೊಡುವುದಿಲ್ಲ. ಸಾಲ ಸಹಿತ ಅದನ್ನು ವಾಪಾಸ್ ಕೊಡಬೇಕಾಗುತ್ತದೆ. 20 ಲಕ್ಷ ಕೋಟಿಯಲ್ಲಿ ಪ್ರತೀ ವರ್ಗದವರಿಗೂ ನೆರವು ದೊರೆಯುತ್ತವೆ ವಿತ್ತ ಸಚಿವರು ಅದರ ಪೂರ್ಣ ವಿವರ ನೀಡಿದಾಗ ಜನರಿಗೆ ಗೊತ್ತಾಗುತ್ತದೆ ಎಂದು ಶಾಸಕರು ಹೇಳಿದರು.
ಈಗ ರಾಜ್ಯ ಸರಕಾರದ ವತಿಯಿಂದ ಮುಖ್ಯಮಂತ್ರಿ ಯಡಿಯೂರಪ್ಪನವರು ಕ್ಷೌರಿಕರಿಗೆ, ಅಗಸರಿಗೆ ಮತ್ತು ಚಮ್ಮಾರರಿಗೆ, ರಿಕ್ಷಾ-ಟ್ಯಾಕ್ಸಿ ಚಾಲಕರಿಗೆ, ಕಾರ್ಮಿಕರಿಗೆ ತಲಾ 5 ಸಾವಿರ ನೀಡುವುದಾಗಿ ಘೋಷಿಸಿದ್ದಾರೆ. ಆಶಾ ಕಾರ್ಯಕರ್ತೆಯರಿಗೆ ಮೂರು ಸಾವಿರ ರೂ. ಘೋಷಿಸಿದ್ದಾರೆ ಎಂದು ಶಾಸಕರು ವಿವರ ನೀಡಿದರು.

ಬ್ಯಾಡ್ಜ್ ಇಲ್ಲದ ರಿಕ್ಷಾ ಚಾಲಕರಿಗೆ ಸಹಾಯಧನ ಬಗ್ಗೆ ಮಾತನಾಡಿ, ರಿಕ್ಷಾದವರು ನನ್ನ ಗಮನಕ್ಕೆ ತಂದಿದ್ದಾರೆ. ನಿಬಂಧನೆಗಳಲ್ಲಿ ಕೆಲವು ಲೋಪದೋಷಗಳಾಗಿವೆ. ಆ ಬಗ್ಗೆ ಸಚಿವರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಿದ್ದೇನೆ. ಅದನ್ನು ಸರಕಾರ ಸರಿಪಡಿಸಲಾಗುತ್ತದೆ ಎಂದು ಶಾಸಕ ಅಂಗಾರ ತಿಳಿಸಿದರು.

34 ಸಾವಿರ ಕಿಟ್ ವಿತರಣೆ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರ ನೇತೃತ್ವದಲ್ಲಿ ಸೇವಾ ಭಾರತಿಯ ಮೂಲಕ 34 ಸಾವಿರ ಕಿಟ್ಟ್ ಗಳನ್ನು ವಿತರಿಸಲಾಗಿದೆ. ಈ ಕಾರ್ಯಕ್ಕೆ ಅನೇಕ ದಾನಿಗಳು ಸಹಕಾರ ನೀಡಿದ್ದಾರೆ. ಅವರಿಗೆಲ್ಲ ನಾವು ಕೃತಜ್ಞತೆ ಸಲ್ಲಿಸುತ್ತೇವೆ ಎಂದು ಜಿ.ಪಂ. ಸದಸ್ಯ ಹಾಗೂ ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದರು.

ಜಿಲ್ಲಾ ಜಿಜೆಪಿ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಮುಳಿಯ ಕೇಶವ ಭಟ್, ಮುಖಂಡರಾದ ವೆಂಕಟ್ ದಂಬೆಕೋಡಿ, ವಿನಯ ಕಂದಡ್ಕ, ಸುಭೋದ್ ಶೆಟ್ಟಿ ಮೇನಾಲ, ರಾಕೇಶ್ ರೈ ಕೆಡೆಂಜಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

46 minutes ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

3 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

10 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

16 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago