ಪುತ್ತೂರು: ಕ್ವಾರಂಟೈನ್ ಉಲ್ಲಂಘಿಸಿದ ಕಾರಣದಿಂದಾಗಿ ಕರಾಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ನಿವಾಸಿ ಯುವಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ವಿರುದ್ಧ ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಪ್ರಕರಣ ದಾಖಲಿಸಿದ್ದಾರೆ.
ದುಬೈನಿಂದ ಬೆಂಗಳೂರು ಮೂಲಕ ಮಾ.21 ರಂದು ಊರಿಗೆ ಆಗಮಿಸಿದ್ದು ಆ ಬಳಿಕ 14 ದಿನಗಳು ಮನೆಯಲ್ಲೇ ಇರುವಂತೆ ಸೂಚನೆ ನೀಡಲಾಗಿತ್ತು. ಆದರೂ ಆತ ಅದನ್ನು ಉಲ್ಲಂಘನೆ ಮಾಡಿದ್ದಾನೆ. ಆ ಬಳಿಕ ಆತನಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಕ್ವಾರೆಂಟೈನ್ ಉಲ್ಲಂಘನೆ ಮಾಡಿದ ಆತನ ಮೇಲೆ ಹಾಗೆಯೇ ಆತನ ಮನೆಯವರ ಮೇಲೆಯೂ ಪುತ್ತೂರು ಸಹಾಯಕ ಆಯುಕ್ತರು ಉಪ್ಪಿನಂಗಡಿ ಪೊಲೀಸರಿಗೆ ದೂರನ್ನು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…
ಕರ್ನಾಟಕದಲ್ಲಿ ಮುಂದಿನ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ…
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…