ಪುತ್ತೂರು: ಕ್ವಾರಂಟೈನ್ ಉಲ್ಲಂಘಿಸಿದ ಕಾರಣದಿಂದಾಗಿ ಕರಾಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೇರಿ ನಿವಾಸಿ ಯುವಕನ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ವಿರುದ್ಧ ಪುತ್ತೂರು ಸಹಾಯಕ ಆಯುಕ್ತ ಡಾ.ಯತೀಶ್ ಉಳ್ಳಾಲ್ ಪ್ರಕರಣ ದಾಖಲಿಸಿದ್ದಾರೆ.
ದುಬೈನಿಂದ ಬೆಂಗಳೂರು ಮೂಲಕ ಮಾ.21 ರಂದು ಊರಿಗೆ ಆಗಮಿಸಿದ್ದು ಆ ಬಳಿಕ 14 ದಿನಗಳು ಮನೆಯಲ್ಲೇ ಇರುವಂತೆ ಸೂಚನೆ ನೀಡಲಾಗಿತ್ತು. ಆದರೂ ಆತ ಅದನ್ನು ಉಲ್ಲಂಘನೆ ಮಾಡಿದ್ದಾನೆ. ಆ ಬಳಿಕ ಆತನಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಕ್ವಾರೆಂಟೈನ್ ಉಲ್ಲಂಘನೆ ಮಾಡಿದ ಆತನ ಮೇಲೆ ಹಾಗೆಯೇ ಆತನ ಮನೆಯವರ ಮೇಲೆಯೂ ಪುತ್ತೂರು ಸಹಾಯಕ ಆಯುಕ್ತರು ಉಪ್ಪಿನಂಗಡಿ ಪೊಲೀಸರಿಗೆ ದೂರನ್ನು ನೀಡಿದ್ದಾರೆ. ಪ್ರಕರಣ ದಾಖಲಾಗಿದೆ.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…