ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಭಾನುವಾರ ಪಾಸಿಟಿವ್ ನ್ಯೂಸ್. ದಕ-ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಇಲ್ಲ. ಇದೇ ವೇಳೆ ಮೊದಲ ಕೊರೊನಾ ವೈರಸ್ ಸೋಂಕಿತ ಗುಣಮುಖರಾಗಿದ್ದು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ. ಹೀಗಾಗಿ ಜಿಲ್ಲೆಗೆ ಇದೆರಡೂ “ಪಾಸಿಟಿವ್ ನ್ಯೂಸ್”.
ಭಾನುವಾರ ಒಟ್ಟು 28 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದೆ. ಎಲ್ಲಾ ವರದಿಗಳು ನೆಗೆಟಿವ್. ಹೀಗಾಗಿ ನೆಮ್ಮದಿಯ ಭಾನುವಾರ.
ದುಬೈನಿಂದ ಬಂದಿದ್ದ ಭಟ್ಕಳ ಮೂಲದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಮಾ.19 ರಂದು ಭಟ್ಕಳ ಮೂಲದ ವ್ಯಕ್ತಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭ ಆತನಲ್ಲಿ ಕೊರೊನಾ ಸೋಂಕು ಲಕ್ಷಣಗಳು ದೃಢಪಟ್ಟಿತ್ತು. ತಕ್ಷಣ ಆತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಗುಣಮುಖನಾಗಿದ್ದು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…