ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಭಾನುವಾರ ಪಾಸಿಟಿವ್ ನ್ಯೂಸ್. ದಕ-ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಇಲ್ಲ. ಇದೇ ವೇಳೆ ಮೊದಲ ಕೊರೊನಾ ವೈರಸ್ ಸೋಂಕಿತ ಗುಣಮುಖರಾಗಿದ್ದು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ. ಹೀಗಾಗಿ ಜಿಲ್ಲೆಗೆ ಇದೆರಡೂ “ಪಾಸಿಟಿವ್ ನ್ಯೂಸ್”.
ಭಾನುವಾರ ಒಟ್ಟು 28 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದೆ. ಎಲ್ಲಾ ವರದಿಗಳು ನೆಗೆಟಿವ್. ಹೀಗಾಗಿ ನೆಮ್ಮದಿಯ ಭಾನುವಾರ.
ದುಬೈನಿಂದ ಬಂದಿದ್ದ ಭಟ್ಕಳ ಮೂಲದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಮಾ.19 ರಂದು ಭಟ್ಕಳ ಮೂಲದ ವ್ಯಕ್ತಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭ ಆತನಲ್ಲಿ ಕೊರೊನಾ ಸೋಂಕು ಲಕ್ಷಣಗಳು ದೃಢಪಟ್ಟಿತ್ತು. ತಕ್ಷಣ ಆತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಗುಣಮುಖನಾಗಿದ್ದು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…