ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಭಾನುವಾರ ಪಾಸಿಟಿವ್ ನ್ಯೂಸ್. ದಕ-ಉಡುಪಿ ಜಿಲ್ಲೆಯಲ್ಲಿ ಭಾನುವಾರ ಕೊರೊನಾ ವೈರಸ್ ಪಾಸಿಟಿವ್ ಪ್ರಕರಣಗಳು ಇಲ್ಲ. ಇದೇ ವೇಳೆ ಮೊದಲ ಕೊರೊನಾ ವೈರಸ್ ಸೋಂಕಿತ ಗುಣಮುಖರಾಗಿದ್ದು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ. ಹೀಗಾಗಿ ಜಿಲ್ಲೆಗೆ ಇದೆರಡೂ “ಪಾಸಿಟಿವ್ ನ್ಯೂಸ್”.
ಭಾನುವಾರ ಒಟ್ಟು 28 ಮಂದಿಯ ಪರೀಕ್ಷಾ ವರದಿ ಲಭ್ಯವಾಗಿದೆ. ಎಲ್ಲಾ ವರದಿಗಳು ನೆಗೆಟಿವ್. ಹೀಗಾಗಿ ನೆಮ್ಮದಿಯ ಭಾನುವಾರ.
ದುಬೈನಿಂದ ಬಂದಿದ್ದ ಭಟ್ಕಳ ಮೂಲದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಮಾ.19 ರಂದು ಭಟ್ಕಳ ಮೂಲದ ವ್ಯಕ್ತಿ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸಿದ್ದ. ವಿಮಾನ ನಿಲ್ದಾಣದಲ್ಲಿ ತಪಾಸಣೆ ಸಂದರ್ಭ ಆತನಲ್ಲಿ ಕೊರೊನಾ ಸೋಂಕು ಲಕ್ಷಣಗಳು ದೃಢಪಟ್ಟಿತ್ತು. ತಕ್ಷಣ ಆತನನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಗುಣಮುಖನಾಗಿದ್ದು ಸೋಮವಾರ ಆಸ್ಪತ್ರೆಯಿಂದ ಬಿಡುಗಡೆ ಹೊಂದಲಿದ್ದಾರೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…