ಸುಳ್ಯ: ಕಳೆದ 3 ದಿನಗಳಿಂದ ಸಂಪೂರ್ಣ ಬಂದ್ ಬಳಿಕ ಮಂಗಳವಾರ ದಿನಸಿ ಖರೀದಿಗೆ ಅವಕಾಶವನ್ನು ಜಿಲ್ಲಾಡಳಿತವು ಬೆಳಗ್ಗೆ 6 ರಿಂದ ಸಂಜೆ 3 ಗಂಟೆಯವರೆಗೆ ನೀಡಿದೆ. ಹೀಗಾಗಿ ಬೆಳಗ್ಗೆ 6 ಗಂಟೆಯಿಂದಲೇ ಹಾಲು, ದಿನಸಿ ಖರೀದಿಗೆ ಜನರು ಆಗಮಿಸಿ ಸಂಪೂರ್ಣ ರಶ್ ಉಂಟಾಗಿತ್ತು. ಸುಳ್ಯ ಪೇಟೆಯಲ್ಲಿ ಬೆಳಗ್ಗಿನಿಂದಲೇ ಜನ ಇದ್ದು ಗ್ರಾಮೀಣ ಭಾಗಗಳಾದ ಸಂಪಾಜೆ, ಕಲ್ಲುಗುಂಡಿ, ಬೆಳ್ಳಾರೆ, ಪಂಜ, ಗುತ್ತಿಗಾರು, ಬಳ್ಪ ಸೇರಿದಂತೆ ತೀರಾ ಗ್ರಾಮೀಣ ಭಾಗದವರೆಗೂ ಇದೇ ಪರಿಸ್ಥಿತಿ ಕಂಡುಬಂದಿದೆ.
ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ನಿಂತಿದ್ದಾರೆ. ಈ ಸಂದರ್ಭ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಈ ಬಗ್ಗೆ ಸ್ಥಳೀಯ ಆಡಳಿತ ಎಚ್ಚರಿಕೆ ವಹಿಸುತ್ತಿದೆ.
ಗ್ರಾಮಿಣ ಭಾಗದಲ್ಲಿ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಂಡುಬಾರದೇ ಇದ್ದರೆ ಸ್ಥಳೀಯರು ಅಥವಾ ಅಂಗಡಿಯವರೇ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟವಾಗಿ ಹೇಳಿದೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…
ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…