ಸುಳ್ಯ: ಕಳೆದ 3 ದಿನಗಳಿಂದ ಸಂಪೂರ್ಣ ಬಂದ್ ಬಳಿಕ ಮಂಗಳವಾರ ದಿನಸಿ ಖರೀದಿಗೆ ಅವಕಾಶವನ್ನು ಜಿಲ್ಲಾಡಳಿತವು ಬೆಳಗ್ಗೆ 6 ರಿಂದ ಸಂಜೆ 3 ಗಂಟೆಯವರೆಗೆ ನೀಡಿದೆ. ಹೀಗಾಗಿ ಬೆಳಗ್ಗೆ 6 ಗಂಟೆಯಿಂದಲೇ ಹಾಲು, ದಿನಸಿ ಖರೀದಿಗೆ ಜನರು ಆಗಮಿಸಿ ಸಂಪೂರ್ಣ ರಶ್ ಉಂಟಾಗಿತ್ತು. ಸುಳ್ಯ ಪೇಟೆಯಲ್ಲಿ ಬೆಳಗ್ಗಿನಿಂದಲೇ ಜನ ಇದ್ದು ಗ್ರಾಮೀಣ ಭಾಗಗಳಾದ ಸಂಪಾಜೆ, ಕಲ್ಲುಗುಂಡಿ, ಬೆಳ್ಳಾರೆ, ಪಂಜ, ಗುತ್ತಿಗಾರು, ಬಳ್ಪ ಸೇರಿದಂತೆ ತೀರಾ ಗ್ರಾಮೀಣ ಭಾಗದವರೆಗೂ ಇದೇ ಪರಿಸ್ಥಿತಿ ಕಂಡುಬಂದಿದೆ.
ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ನಿಂತಿದ್ದಾರೆ. ಈ ಸಂದರ್ಭ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಈ ಬಗ್ಗೆ ಸ್ಥಳೀಯ ಆಡಳಿತ ಎಚ್ಚರಿಕೆ ವಹಿಸುತ್ತಿದೆ.
ಗ್ರಾಮಿಣ ಭಾಗದಲ್ಲಿ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಂಡುಬಾರದೇ ಇದ್ದರೆ ಸ್ಥಳೀಯರು ಅಥವಾ ಅಂಗಡಿಯವರೇ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟವಾಗಿ ಹೇಳಿದೆ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…
ಕೃಷಿಕರಿಗೆ ಹವಾಮಾನದ ಬದಲಾವಣೆಯ ಮಾಹಿತಿ ಇರುವುದಿಲ್ಲ. ಇದಕ್ಕಾಗಿ ಡಿಸೀಸ್ ಫಾರ್ಕಾಸ್ಟ್ ಅಂದರೆ ಯಾವ…
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯ ಅನ್ವಯ, ಉತ್ತರ ಕನ್ನಡ…
ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…
ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…
ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…