ಸುಳ್ಯ: ಕಳೆದ 3 ದಿನಗಳಿಂದ ಸಂಪೂರ್ಣ ಬಂದ್ ಬಳಿಕ ಮಂಗಳವಾರ ದಿನಸಿ ಖರೀದಿಗೆ ಅವಕಾಶವನ್ನು ಜಿಲ್ಲಾಡಳಿತವು ಬೆಳಗ್ಗೆ 6 ರಿಂದ ಸಂಜೆ 3 ಗಂಟೆಯವರೆಗೆ ನೀಡಿದೆ. ಹೀಗಾಗಿ ಬೆಳಗ್ಗೆ 6 ಗಂಟೆಯಿಂದಲೇ ಹಾಲು, ದಿನಸಿ ಖರೀದಿಗೆ ಜನರು ಆಗಮಿಸಿ ಸಂಪೂರ್ಣ ರಶ್ ಉಂಟಾಗಿತ್ತು. ಸುಳ್ಯ ಪೇಟೆಯಲ್ಲಿ ಬೆಳಗ್ಗಿನಿಂದಲೇ ಜನ ಇದ್ದು ಗ್ರಾಮೀಣ ಭಾಗಗಳಾದ ಸಂಪಾಜೆ, ಕಲ್ಲುಗುಂಡಿ, ಬೆಳ್ಳಾರೆ, ಪಂಜ, ಗುತ್ತಿಗಾರು, ಬಳ್ಪ ಸೇರಿದಂತೆ ತೀರಾ ಗ್ರಾಮೀಣ ಭಾಗದವರೆಗೂ ಇದೇ ಪರಿಸ್ಥಿತಿ ಕಂಡುಬಂದಿದೆ.
ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ನಿಂತಿದ್ದಾರೆ. ಈ ಸಂದರ್ಭ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಈ ಬಗ್ಗೆ ಸ್ಥಳೀಯ ಆಡಳಿತ ಎಚ್ಚರಿಕೆ ವಹಿಸುತ್ತಿದೆ.
ಗ್ರಾಮಿಣ ಭಾಗದಲ್ಲಿ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಂಡುಬಾರದೇ ಇದ್ದರೆ ಸ್ಥಳೀಯರು ಅಥವಾ ಅಂಗಡಿಯವರೇ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟವಾಗಿ ಹೇಳಿದೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…