ಸುಳ್ಯ: ಕಳೆದ 3 ದಿನಗಳಿಂದ ಸಂಪೂರ್ಣ ಬಂದ್ ಬಳಿಕ ಮಂಗಳವಾರ ದಿನಸಿ ಖರೀದಿಗೆ ಅವಕಾಶವನ್ನು ಜಿಲ್ಲಾಡಳಿತವು ಬೆಳಗ್ಗೆ 6 ರಿಂದ ಸಂಜೆ 3 ಗಂಟೆಯವರೆಗೆ ನೀಡಿದೆ. ಹೀಗಾಗಿ ಬೆಳಗ್ಗೆ 6 ಗಂಟೆಯಿಂದಲೇ ಹಾಲು, ದಿನಸಿ ಖರೀದಿಗೆ ಜನರು ಆಗಮಿಸಿ ಸಂಪೂರ್ಣ ರಶ್ ಉಂಟಾಗಿತ್ತು. ಸುಳ್ಯ ಪೇಟೆಯಲ್ಲಿ ಬೆಳಗ್ಗಿನಿಂದಲೇ ಜನ ಇದ್ದು ಗ್ರಾಮೀಣ ಭಾಗಗಳಾದ ಸಂಪಾಜೆ, ಕಲ್ಲುಗುಂಡಿ, ಬೆಳ್ಳಾರೆ, ಪಂಜ, ಗುತ್ತಿಗಾರು, ಬಳ್ಪ ಸೇರಿದಂತೆ ತೀರಾ ಗ್ರಾಮೀಣ ಭಾಗದವರೆಗೂ ಇದೇ ಪರಿಸ್ಥಿತಿ ಕಂಡುಬಂದಿದೆ.
ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ನಿಂತಿದ್ದಾರೆ. ಈ ಸಂದರ್ಭ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಈ ಬಗ್ಗೆ ಸ್ಥಳೀಯ ಆಡಳಿತ ಎಚ್ಚರಿಕೆ ವಹಿಸುತ್ತಿದೆ.
ಗ್ರಾಮಿಣ ಭಾಗದಲ್ಲಿ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಂಡುಬಾರದೇ ಇದ್ದರೆ ಸ್ಥಳೀಯರು ಅಥವಾ ಅಂಗಡಿಯವರೇ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟವಾಗಿ ಹೇಳಿದೆ.
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…