ಸುಳ್ಯ: ಕಳೆದ 3 ದಿನಗಳಿಂದ ಸಂಪೂರ್ಣ ಬಂದ್ ಬಳಿಕ ಮಂಗಳವಾರ ದಿನಸಿ ಖರೀದಿಗೆ ಅವಕಾಶವನ್ನು ಜಿಲ್ಲಾಡಳಿತವು ಬೆಳಗ್ಗೆ 6 ರಿಂದ ಸಂಜೆ 3 ಗಂಟೆಯವರೆಗೆ ನೀಡಿದೆ. ಹೀಗಾಗಿ ಬೆಳಗ್ಗೆ 6 ಗಂಟೆಯಿಂದಲೇ ಹಾಲು, ದಿನಸಿ ಖರೀದಿಗೆ ಜನರು ಆಗಮಿಸಿ ಸಂಪೂರ್ಣ ರಶ್ ಉಂಟಾಗಿತ್ತು. ಸುಳ್ಯ ಪೇಟೆಯಲ್ಲಿ ಬೆಳಗ್ಗಿನಿಂದಲೇ ಜನ ಇದ್ದು ಗ್ರಾಮೀಣ ಭಾಗಗಳಾದ ಸಂಪಾಜೆ, ಕಲ್ಲುಗುಂಡಿ, ಬೆಳ್ಳಾರೆ, ಪಂಜ, ಗುತ್ತಿಗಾರು, ಬಳ್ಪ ಸೇರಿದಂತೆ ತೀರಾ ಗ್ರಾಮೀಣ ಭಾಗದವರೆಗೂ ಇದೇ ಪರಿಸ್ಥಿತಿ ಕಂಡುಬಂದಿದೆ.
ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ನಿಂತಿದ್ದಾರೆ. ಈ ಸಂದರ್ಭ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಈ ಬಗ್ಗೆ ಸ್ಥಳೀಯ ಆಡಳಿತ ಎಚ್ಚರಿಕೆ ವಹಿಸುತ್ತಿದೆ.
ಗ್ರಾಮಿಣ ಭಾಗದಲ್ಲಿ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಂಡುಬಾರದೇ ಇದ್ದರೆ ಸ್ಥಳೀಯರು ಅಥವಾ ಅಂಗಡಿಯವರೇ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟವಾಗಿ ಹೇಳಿದೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…