ಸುಳ್ಯ: ಕಳೆದ 3 ದಿನಗಳಿಂದ ಸಂಪೂರ್ಣ ಬಂದ್ ಬಳಿಕ ಮಂಗಳವಾರ ದಿನಸಿ ಖರೀದಿಗೆ ಅವಕಾಶವನ್ನು ಜಿಲ್ಲಾಡಳಿತವು ಬೆಳಗ್ಗೆ 6 ರಿಂದ ಸಂಜೆ 3 ಗಂಟೆಯವರೆಗೆ ನೀಡಿದೆ. ಹೀಗಾಗಿ ಬೆಳಗ್ಗೆ 6 ಗಂಟೆಯಿಂದಲೇ ಹಾಲು, ದಿನಸಿ ಖರೀದಿಗೆ ಜನರು ಆಗಮಿಸಿ ಸಂಪೂರ್ಣ ರಶ್ ಉಂಟಾಗಿತ್ತು. ಸುಳ್ಯ ಪೇಟೆಯಲ್ಲಿ ಬೆಳಗ್ಗಿನಿಂದಲೇ ಜನ ಇದ್ದು ಗ್ರಾಮೀಣ ಭಾಗಗಳಾದ ಸಂಪಾಜೆ, ಕಲ್ಲುಗುಂಡಿ, ಬೆಳ್ಳಾರೆ, ಪಂಜ, ಗುತ್ತಿಗಾರು, ಬಳ್ಪ ಸೇರಿದಂತೆ ತೀರಾ ಗ್ರಾಮೀಣ ಭಾಗದವರೆಗೂ ಇದೇ ಪರಿಸ್ಥಿತಿ ಕಂಡುಬಂದಿದೆ.
ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ನಿಂತಿದ್ದಾರೆ. ಈ ಸಂದರ್ಭ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಈ ಬಗ್ಗೆ ಸ್ಥಳೀಯ ಆಡಳಿತ ಎಚ್ಚರಿಕೆ ವಹಿಸುತ್ತಿದೆ.
ಗ್ರಾಮಿಣ ಭಾಗದಲ್ಲಿ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಂಡುಬಾರದೇ ಇದ್ದರೆ ಸ್ಥಳೀಯರು ಅಥವಾ ಅಂಗಡಿಯವರೇ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟವಾಗಿ ಹೇಳಿದೆ.
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…