ಸುಳ್ಯ: ಕಳೆದ 3 ದಿನಗಳಿಂದ ಸಂಪೂರ್ಣ ಬಂದ್ ಬಳಿಕ ಮಂಗಳವಾರ ದಿನಸಿ ಖರೀದಿಗೆ ಅವಕಾಶವನ್ನು ಜಿಲ್ಲಾಡಳಿತವು ಬೆಳಗ್ಗೆ 6 ರಿಂದ ಸಂಜೆ 3 ಗಂಟೆಯವರೆಗೆ ನೀಡಿದೆ. ಹೀಗಾಗಿ ಬೆಳಗ್ಗೆ 6 ಗಂಟೆಯಿಂದಲೇ ಹಾಲು, ದಿನಸಿ ಖರೀದಿಗೆ ಜನರು ಆಗಮಿಸಿ ಸಂಪೂರ್ಣ ರಶ್ ಉಂಟಾಗಿತ್ತು. ಸುಳ್ಯ ಪೇಟೆಯಲ್ಲಿ ಬೆಳಗ್ಗಿನಿಂದಲೇ ಜನ ಇದ್ದು ಗ್ರಾಮೀಣ ಭಾಗಗಳಾದ ಸಂಪಾಜೆ, ಕಲ್ಲುಗುಂಡಿ, ಬೆಳ್ಳಾರೆ, ಪಂಜ, ಗುತ್ತಿಗಾರು, ಬಳ್ಪ ಸೇರಿದಂತೆ ತೀರಾ ಗ್ರಾಮೀಣ ಭಾಗದವರೆಗೂ ಇದೇ ಪರಿಸ್ಥಿತಿ ಕಂಡುಬಂದಿದೆ.
ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ನಿಂತಿದ್ದಾರೆ. ಈ ಸಂದರ್ಭ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಈ ಬಗ್ಗೆ ಸ್ಥಳೀಯ ಆಡಳಿತ ಎಚ್ಚರಿಕೆ ವಹಿಸುತ್ತಿದೆ.
ಗ್ರಾಮಿಣ ಭಾಗದಲ್ಲಿ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಂಡುಬಾರದೇ ಇದ್ದರೆ ಸ್ಥಳೀಯರು ಅಥವಾ ಅಂಗಡಿಯವರೇ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟವಾಗಿ ಹೇಳಿದೆ.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…