ಸುಳ್ಯ: ಕಳೆದ 3 ದಿನಗಳಿಂದ ಸಂಪೂರ್ಣ ಬಂದ್ ಬಳಿಕ ಮಂಗಳವಾರ ದಿನಸಿ ಖರೀದಿಗೆ ಅವಕಾಶವನ್ನು ಜಿಲ್ಲಾಡಳಿತವು ಬೆಳಗ್ಗೆ 6 ರಿಂದ ಸಂಜೆ 3 ಗಂಟೆಯವರೆಗೆ ನೀಡಿದೆ. ಹೀಗಾಗಿ ಬೆಳಗ್ಗೆ 6 ಗಂಟೆಯಿಂದಲೇ ಹಾಲು, ದಿನಸಿ ಖರೀದಿಗೆ ಜನರು ಆಗಮಿಸಿ ಸಂಪೂರ್ಣ ರಶ್ ಉಂಟಾಗಿತ್ತು. ಸುಳ್ಯ ಪೇಟೆಯಲ್ಲಿ ಬೆಳಗ್ಗಿನಿಂದಲೇ ಜನ ಇದ್ದು ಗ್ರಾಮೀಣ ಭಾಗಗಳಾದ ಸಂಪಾಜೆ, ಕಲ್ಲುಗುಂಡಿ, ಬೆಳ್ಳಾರೆ, ಪಂಜ, ಗುತ್ತಿಗಾರು, ಬಳ್ಪ ಸೇರಿದಂತೆ ತೀರಾ ಗ್ರಾಮೀಣ ಭಾಗದವರೆಗೂ ಇದೇ ಪರಿಸ್ಥಿತಿ ಕಂಡುಬಂದಿದೆ.
ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಜನರು ನಿಂತಿದ್ದಾರೆ. ಈ ಸಂದರ್ಭ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಈ ಬಗ್ಗೆ ಸ್ಥಳೀಯ ಆಡಳಿತ ಎಚ್ಚರಿಕೆ ವಹಿಸುತ್ತಿದೆ.
ಗ್ರಾಮಿಣ ಭಾಗದಲ್ಲಿ ಸಾಮಾಜಿಕ ಅಂತರ ಕನಿಷ್ಠ 3 ಅಡಿ ಹಾಗೂ ಮುಖಕ್ಕೆ ಮಾಸ್ಕ್ ಧರಿಸುವುದು ಕಂಡುಬಾರದೇ ಇದ್ದರೆ ಸ್ಥಳೀಯರು ಅಥವಾ ಅಂಗಡಿಯವರೇ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾಡಳಿತ ಸ್ಪಷ್ಟವಾಗಿ ಹೇಳಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…