ಮಂಗಳೂರು: ಎರಡು ದಿನಗಳ ಕಾಲ ದ ಕ ಜಿಲ್ಲೆ ಸಂಪೂರ್ಣ ಬಂದ್ ಮಾಡಿದ ಬಳಿಕ ಮಂಗಳವಾರ ದಿನಸಿ ಹಾಗೂ ಅಗತ್ಯ ವಸ್ತು ಖರೀದಿಗೆ ಅವಕಾಶ ನೀಡಿದ ಬೆನ್ನಿಗೇ ಜನರು ಮುಗಿ ಬಿದ್ದು ಖರೀದಿಯಲ್ಲಿ ತೊಡಗಿಸಿದರು. ಇದೀಗ ಪರಿಸ್ಥಿತಿ ಗಮನಿಸಿ ಬುಧವಾರದಿಂದ ದ.ಕ. ಜಿಲ್ಲೆಯಲ್ಲಿ ಎಲ್ಲಾ ಅಗತ್ಯ ವಸ್ತುಗಳು ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರತಿನಿತ್ಯ ಅಗತ್ಯ ಸಾಮಾಗ್ರಿಗಳು ಲಭ್ಯವಾಗಲಿದೆ. ಆದರೆ ಸಾಮಾಜಿಕ ಅಂತರ ಹಾಗೂ ಮುಂಜಾಗ್ರತೆಗಳು ಎಂದಿನಂತೆ ಕಡ್ಡಾಯವಾಗಿ ಇರಲಿದೆ.
ಮಂಗಳವಾರದ ಪರಿಸ್ಥಿತಿ ಗಮನಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬುಧವಾರದಿಂದ ಬೆಳಗ್ಗೆ 7 ರಿಂದ ಮಧ್ಯಾಹ್ನ 12 ಗಂಟೆಯ ತನಕ ಪ್ರತಿನಿತ್ಯ ಅಗತ್ಯ ಸಾಮಾಗ್ರಿಗಳು ಲಭ್ಯವಾಗಲಿದೆ ಎಂದು ತಿಳಿಸಿದ್ದಾರೆ. ಅಗತ್ಯ ವಸ್ತುಗಳಾದ ದಿನಸಿ, ಹಾಲು, ಮೆಡಿಕಲ್, ಗ್ಯಾಸ್, ಪೆಟ್ರೋಲ್, ಬ್ಯಾಂಕ್ ಸೇರಿದಂತೆ ವೈದ್ಯಕೀಯ ಸೇವೆ ಲಭ್ಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…