ಸುಳ್ಯ: ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ಡೌನ್ ಮಾಡಲಾಗಿದೆ. ಎರಡು ದಿನಗಳಿಂದ ಸಂಪೂರ್ಣ ಬಂದ್ ಮಾಡಲಾಗಿತ್ತು.ಇದೀಗ ಮಂಗಳವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲೆಯಾದ್ಯಂತ ದಿನಸಿ ಖರೀದಿಗೆ ಜಿಲ್ಲಾಡಳಿತದಿಂದ ಅವಕಾಶ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಕಟ್ಟುನಿಟ್ಟಾಗಿ ಕಾಯ್ದುಕೊಳ್ಳಲು ಮನವಿ ಮಾಡಲಾಗಿದೆ.
ಸುಳ್ಯದಲ್ಲಿ ಸಹಾಯಕ ಕಮೀಶನರ್ ನೇತೃತ್ವದಲ್ಲಿ ಸಭೆಯಲ್ಲಿ ಈ ಬಗ್ಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ದಿನಸಿ ಖರೀದಿಗೆ ಅವಕಾಶ ನೀಡಲಾಗುತ್ತಿದೆ. ಆದರೆ ಅಗತ್ಯಕ್ಕಿಂತ ಹೆಚ್ಚಿನ ದಿನಸಿ ವಸ್ತುಗಳ ಖರೀದಿ ಮಾಡಬೇಡಿ , ಆಹಾರ ಸಾಮಾಗ್ರಿಗಳಿಗೆ ಕೊರತೆಯಾಗದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ ಎಂದು ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ ತಿಳಿಸಿದ್ದಾರೆ.
ಇದೇ ವೇಳೆ ಆಹಾರ , ತರಕಾರಿಯನ್ನು ವಿಪರೀತ ಧಾರಣೆಗೆ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಅನಗತ್ಯವಾಗಿ ದರ ಏರಿಕೆ ಮಾಡಿದರೆ ಅಂತಹವರು ಲೈಸನ್ಸ್ ರದ್ದು ಮಾಡಲು ಕೂಡಾ ಯೋಚನೆ ಮಾಡಲಾಗುತ್ತದೆ ಎಂದು ಇದೇ ವೇಳೆ ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ ತಿಳಿಸಿದ್ದಾರೆ.
ಜ್ಯೋತಿಷ್ಯ ಶಾಸ್ತ್ರದಲ್ಲಿ ಕೇತು ಒಂದು ನಿಗೂಢ ಗ್ರಹವಾಗಿದ್ದು, ಆಧ್ಯಾತ್ಮಿಕತೆ, ಕರ್ಮ, ಮತ್ತು ಜೀವನದಲ್ಲಿ…
ಕೋಲಾರ ಜಿಲ್ಲೆಯ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಗ್ರಾಮ ಪಂಚಾಯತಿ ಸೇರಿದಂತೆ ಯಾವುದೇ…
ಹಾವೇರಿ ಜಿಲ್ಲೆಯಲ್ಲಿ ಹರಿಯುವ ವರದಾ ಹಾಗೂ ತುಂಗಭದ್ರಾ ನದಿಗಳಲ್ಲಿ ನೀರಿನ ಮಟ್ಟ ಕ್ರಮೇಣ…
ಅಸಂಘಟಿತ ಕಾರ್ಮಿಕರ ಹಿತರಕ್ಷಣೆಗಾಗಿ ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು, 23 ಅಸಂಘಟಿತ ವರ್ಗಗಳ…
ಹಾವೇರಿ ಜಿಲ್ಲೆಯಲ್ಲಿ ಪೂರ್ವ ಮುಂಗಾರು ಹಾಗೂ ಮುಂಗಾರು ಮಳೆಯಿಂದಾಗಿ 148.57 ಹೆಕ್ಟೇರ್ ಪ್ರದೇಶದಲ್ಲಿದ್ದ…
ಹಾಸನದಲ್ಲಿ ಸಂಭವಿಸಿದ ಹೃದಯಾಘಾತ ಕುರಿತಂತೆ ಸರ್ಕಾರಕ್ಕೆ ತನಿಖಾ ವರದಿ ಸಲ್ಲಿಕೆಯಾಗಿದೆ ಎಂದು ಆರೋಗ್ಯ…