ಸುಳ್ಯ: ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ಡೌನ್ ಮಾಡಲಾಗಿದೆ. ಎರಡು ದಿನಗಳಿಂದ ಸಂಪೂರ್ಣ ಬಂದ್ ಮಾಡಲಾಗಿತ್ತು.ಇದೀಗ ಮಂಗಳವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲೆಯಾದ್ಯಂತ ದಿನಸಿ ಖರೀದಿಗೆ ಜಿಲ್ಲಾಡಳಿತದಿಂದ ಅವಕಾಶ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಕಟ್ಟುನಿಟ್ಟಾಗಿ ಕಾಯ್ದುಕೊಳ್ಳಲು ಮನವಿ ಮಾಡಲಾಗಿದೆ.
ಸುಳ್ಯದಲ್ಲಿ ಸಹಾಯಕ ಕಮೀಶನರ್ ನೇತೃತ್ವದಲ್ಲಿ ಸಭೆಯಲ್ಲಿ ಈ ಬಗ್ಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ದಿನಸಿ ಖರೀದಿಗೆ ಅವಕಾಶ ನೀಡಲಾಗುತ್ತಿದೆ. ಆದರೆ ಅಗತ್ಯಕ್ಕಿಂತ ಹೆಚ್ಚಿನ ದಿನಸಿ ವಸ್ತುಗಳ ಖರೀದಿ ಮಾಡಬೇಡಿ , ಆಹಾರ ಸಾಮಾಗ್ರಿಗಳಿಗೆ ಕೊರತೆಯಾಗದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ ಎಂದು ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ ತಿಳಿಸಿದ್ದಾರೆ.
ಇದೇ ವೇಳೆ ಆಹಾರ , ತರಕಾರಿಯನ್ನು ವಿಪರೀತ ಧಾರಣೆಗೆ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಅನಗತ್ಯವಾಗಿ ದರ ಏರಿಕೆ ಮಾಡಿದರೆ ಅಂತಹವರು ಲೈಸನ್ಸ್ ರದ್ದು ಮಾಡಲು ಕೂಡಾ ಯೋಚನೆ ಮಾಡಲಾಗುತ್ತದೆ ಎಂದು ಇದೇ ವೇಳೆ ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ ತಿಳಿಸಿದ್ದಾರೆ.
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…