ಸುಳ್ಯ: ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ಡೌನ್ ಮಾಡಲಾಗಿದೆ. ಎರಡು ದಿನಗಳಿಂದ ಸಂಪೂರ್ಣ ಬಂದ್ ಮಾಡಲಾಗಿತ್ತು.ಇದೀಗ ಮಂಗಳವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲೆಯಾದ್ಯಂತ ದಿನಸಿ ಖರೀದಿಗೆ ಜಿಲ್ಲಾಡಳಿತದಿಂದ ಅವಕಾಶ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಕಟ್ಟುನಿಟ್ಟಾಗಿ ಕಾಯ್ದುಕೊಳ್ಳಲು ಮನವಿ ಮಾಡಲಾಗಿದೆ.
ಸುಳ್ಯದಲ್ಲಿ ಸಹಾಯಕ ಕಮೀಶನರ್ ನೇತೃತ್ವದಲ್ಲಿ ಸಭೆಯಲ್ಲಿ ಈ ಬಗ್ಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ದಿನಸಿ ಖರೀದಿಗೆ ಅವಕಾಶ ನೀಡಲಾಗುತ್ತಿದೆ. ಆದರೆ ಅಗತ್ಯಕ್ಕಿಂತ ಹೆಚ್ಚಿನ ದಿನಸಿ ವಸ್ತುಗಳ ಖರೀದಿ ಮಾಡಬೇಡಿ , ಆಹಾರ ಸಾಮಾಗ್ರಿಗಳಿಗೆ ಕೊರತೆಯಾಗದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ ಎಂದು ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ ತಿಳಿಸಿದ್ದಾರೆ.
ಇದೇ ವೇಳೆ ಆಹಾರ , ತರಕಾರಿಯನ್ನು ವಿಪರೀತ ಧಾರಣೆಗೆ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಅನಗತ್ಯವಾಗಿ ದರ ಏರಿಕೆ ಮಾಡಿದರೆ ಅಂತಹವರು ಲೈಸನ್ಸ್ ರದ್ದು ಮಾಡಲು ಕೂಡಾ ಯೋಚನೆ ಮಾಡಲಾಗುತ್ತದೆ ಎಂದು ಇದೇ ವೇಳೆ ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ ತಿಳಿಸಿದ್ದಾರೆ.
ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…
ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…
ರಾಜ್ಯದಲ್ಲಿ ಹೋಟೆಲ್ಗಳಿಗೆ ವಾಣಿಜ್ಯ LPG ಕೊರತೆಯನ್ನು ಸರಿಪಡಿಸಲು ಮಂಗಳವಾರದಿಂದ ಹೆಚ್ಚುವರಿ ಸಿಲಿಂಡರ್ ಸರಬರಾಜು…
ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.…
ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯಿಂದ ಮರಗಳು ಮತ್ತು ವಿದ್ಯುತ್ ಕಂಬಗಳು ಧರೆಗುರುಳಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.…
ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…