ಸುಳ್ಯ: ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ಡೌನ್ ಮಾಡಲಾಗಿದೆ. ಎರಡು ದಿನಗಳಿಂದ ಸಂಪೂರ್ಣ ಬಂದ್ ಮಾಡಲಾಗಿತ್ತು.ಇದೀಗ ಮಂಗಳವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲೆಯಾದ್ಯಂತ ದಿನಸಿ ಖರೀದಿಗೆ ಜಿಲ್ಲಾಡಳಿತದಿಂದ ಅವಕಾಶ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಕಟ್ಟುನಿಟ್ಟಾಗಿ ಕಾಯ್ದುಕೊಳ್ಳಲು ಮನವಿ ಮಾಡಲಾಗಿದೆ.
ಸುಳ್ಯದಲ್ಲಿ ಸಹಾಯಕ ಕಮೀಶನರ್ ನೇತೃತ್ವದಲ್ಲಿ ಸಭೆಯಲ್ಲಿ ಈ ಬಗ್ಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ದಿನಸಿ ಖರೀದಿಗೆ ಅವಕಾಶ ನೀಡಲಾಗುತ್ತಿದೆ. ಆದರೆ ಅಗತ್ಯಕ್ಕಿಂತ ಹೆಚ್ಚಿನ ದಿನಸಿ ವಸ್ತುಗಳ ಖರೀದಿ ಮಾಡಬೇಡಿ , ಆಹಾರ ಸಾಮಾಗ್ರಿಗಳಿಗೆ ಕೊರತೆಯಾಗದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ ಎಂದು ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ ತಿಳಿಸಿದ್ದಾರೆ.
ಇದೇ ವೇಳೆ ಆಹಾರ , ತರಕಾರಿಯನ್ನು ವಿಪರೀತ ಧಾರಣೆಗೆ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಅನಗತ್ಯವಾಗಿ ದರ ಏರಿಕೆ ಮಾಡಿದರೆ ಅಂತಹವರು ಲೈಸನ್ಸ್ ರದ್ದು ಮಾಡಲು ಕೂಡಾ ಯೋಚನೆ ಮಾಡಲಾಗುತ್ತದೆ ಎಂದು ಇದೇ ವೇಳೆ ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ ತಿಳಿಸಿದ್ದಾರೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…