ಸುಳ್ಯ: ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ಡೌನ್ ಮಾಡಲಾಗಿದೆ. ಎರಡು ದಿನಗಳಿಂದ ಸಂಪೂರ್ಣ ಬಂದ್ ಮಾಡಲಾಗಿತ್ತು.ಇದೀಗ ಮಂಗಳವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲೆಯಾದ್ಯಂತ ದಿನಸಿ ಖರೀದಿಗೆ ಜಿಲ್ಲಾಡಳಿತದಿಂದ ಅವಕಾಶ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಕಟ್ಟುನಿಟ್ಟಾಗಿ ಕಾಯ್ದುಕೊಳ್ಳಲು ಮನವಿ ಮಾಡಲಾಗಿದೆ.
ಸುಳ್ಯದಲ್ಲಿ ಸಹಾಯಕ ಕಮೀಶನರ್ ನೇತೃತ್ವದಲ್ಲಿ ಸಭೆಯಲ್ಲಿ ಈ ಬಗ್ಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ದಿನಸಿ ಖರೀದಿಗೆ ಅವಕಾಶ ನೀಡಲಾಗುತ್ತಿದೆ. ಆದರೆ ಅಗತ್ಯಕ್ಕಿಂತ ಹೆಚ್ಚಿನ ದಿನಸಿ ವಸ್ತುಗಳ ಖರೀದಿ ಮಾಡಬೇಡಿ , ಆಹಾರ ಸಾಮಾಗ್ರಿಗಳಿಗೆ ಕೊರತೆಯಾಗದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ ಎಂದು ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ ತಿಳಿಸಿದ್ದಾರೆ.
ಇದೇ ವೇಳೆ ಆಹಾರ , ತರಕಾರಿಯನ್ನು ವಿಪರೀತ ಧಾರಣೆಗೆ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಅನಗತ್ಯವಾಗಿ ದರ ಏರಿಕೆ ಮಾಡಿದರೆ ಅಂತಹವರು ಲೈಸನ್ಸ್ ರದ್ದು ಮಾಡಲು ಕೂಡಾ ಯೋಚನೆ ಮಾಡಲಾಗುತ್ತದೆ ಎಂದು ಇದೇ ವೇಳೆ ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ ತಿಳಿಸಿದ್ದಾರೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…