ಸುಳ್ಯ: ಕೊರೊನಾ ವೈರಸ್ ಹರಡುವುದು ತಡೆಯಲು ಲಾಕ್ಡೌನ್ ಮಾಡಲಾಗಿದೆ. ಎರಡು ದಿನಗಳಿಂದ ಸಂಪೂರ್ಣ ಬಂದ್ ಮಾಡಲಾಗಿತ್ತು.ಇದೀಗ ಮಂಗಳವಾರ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲೆಯಾದ್ಯಂತ ದಿನಸಿ ಖರೀದಿಗೆ ಜಿಲ್ಲಾಡಳಿತದಿಂದ ಅವಕಾಶ ನೀಡಲಾಗಿದೆ. ಆದರೆ ಸಾಮಾಜಿಕ ಅಂತರ ಕಟ್ಟುನಿಟ್ಟಾಗಿ ಕಾಯ್ದುಕೊಳ್ಳಲು ಮನವಿ ಮಾಡಲಾಗಿದೆ.
ಸುಳ್ಯದಲ್ಲಿ ಸಹಾಯಕ ಕಮೀಶನರ್ ನೇತೃತ್ವದಲ್ಲಿ ಸಭೆಯಲ್ಲಿ ಈ ಬಗ್ಗೆ ಬೆಳಗ್ಗೆ 6 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ದಿನಸಿ ಖರೀದಿಗೆ ಅವಕಾಶ ನೀಡಲಾಗುತ್ತಿದೆ. ಆದರೆ ಅಗತ್ಯಕ್ಕಿಂತ ಹೆಚ್ಚಿನ ದಿನಸಿ ವಸ್ತುಗಳ ಖರೀದಿ ಮಾಡಬೇಡಿ , ಆಹಾರ ಸಾಮಾಗ್ರಿಗಳಿಗೆ ಕೊರತೆಯಾಗದಂತೆ ಜಿಲ್ಲಾಡಳಿತ ಕ್ರಮ ಕೈಗೊಳ್ಳುತ್ತಿದೆ ಎಂದು ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ ತಿಳಿಸಿದ್ದಾರೆ.
ಇದೇ ವೇಳೆ ಆಹಾರ , ತರಕಾರಿಯನ್ನು ವಿಪರೀತ ಧಾರಣೆಗೆ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ. ಅನಗತ್ಯವಾಗಿ ದರ ಏರಿಕೆ ಮಾಡಿದರೆ ಅಂತಹವರು ಲೈಸನ್ಸ್ ರದ್ದು ಮಾಡಲು ಕೂಡಾ ಯೋಚನೆ ಮಾಡಲಾಗುತ್ತದೆ ಎಂದು ಇದೇ ವೇಳೆ ಸಹಾಯಕ ಕಮೀಶನರ್ ಡಾ.ಯತೀಶ್ ಉಳ್ಳಾಲ ತಿಳಿಸಿದ್ದಾರೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…