#ಕೊರೊನಾ ಲಾಕ್ಡೌನ್ : ಮಾ.28 – ದ ಕ ಜಿಲ್ಲೆಯಲ್ಲಿ ಎಲ್ಲಾ ವಾಣಿಜ್ಯ ವ್ಯವಹಾರ ಸಂಪೂರ್ಣ ಸ್ಥಗಿತ

March 27, 2020
9:27 PM

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಮಾ.28 ರಂದು ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು  ಎಂದು ಜಿಲ್ಲಾದಿಕಾರಿಗಳ ಪ್ರಕಟಣೆ ತಿಳಿಸಿದೆ.

Advertisement
Advertisement

ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ  ನಡೆದ ಸಭೆಯಲ್ಲಿ  ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 7 ಕೊರೊನಾ ವೈರಸ್ ಸೋಂಕಿತರ ಪ್ರಕರಣ ಪತ್ತೆಯಾಗಿದೆ. ನೆರೆಯ ಕಾಸರಗೋಡು, ಉತ್ತರಕನ್ನಡ ಜಿಲ್ಲೆಯಲ್ಲೂ ಪಾಸಿಟಿವ್ ಪ್ರಕರಣ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ  ಸಾರ್ವಜನಿಕ ಓಡಾಟ ನಿರ್ಬಂಧಿಸಿದೇ ಇದ್ದರೆ ಮುಂದಿನ ದಿನ ಇನ್ನಷ್ಟು ಅಪಾಯಕಾರಿಯಾಗಿದೆ. ಜನರ ಉತ್ತಮ ಭವಿಷ್ಯಕ್ಕಾಗಿ ಕೈಗೊಳ್ಳುವ ಈ ನಿರ್ಧಾರವನ್ನು ಎಲ್ಲರೂ ಬೆಂಬಲಿಸಬೇಕು. ಸಾರ್ವಜನಿಕರ ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಅನಿವಾರ್ಯವಾಗಿದೆ. ಪ್ರತಿಯಿಬ್ಬರೂ ಮನೆಯಲ್ಲಿ ಕೂತು ಸಾಮಾಜಿಕ ಅಂತರ ಕಾಪಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಪ್ರಧಾನಿಗಳು, ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದಕ ಜಿಲ್ಲೆಯಲ್ಲಿ  ನಾಳೆಯಿಂದ ಎಲ್ಲಾ ಚಟುವಟಿಕೆ ವಾಣಿಜ್ಯ ವ್ಯವಹಾರಗಳನ್ನು , ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡಲಾಗುವುದು  ಎಂದು ಸಭೆಯಲ್ಲಿ  ತೀರ್ಮಾನ ಮಾಡಲಾಗಿದೆ ಎಂದು ಜಿ್ಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

ಸಭೆಯಲ್ಲಿ ಸಂಸದರು, ಶಾಸಕರು, ಜಿಪಂ ಅಧ್ಯಕ್ಷರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಉತ್ತಮ ಮಳೆಯಿಂದ ಹಸಿರಾದ ವನ್ಯಜೀವಿ ತಾಣ | ಚಾಮರಾಜನಗರ ಜಿಲ್ಲೆಯ ಹಲವೆಡೆ ಹಸಿರು ಸಂಭ್ರಮ
May 24, 2025
11:10 AM
by: ದ ರೂರಲ್ ಮಿರರ್.ಕಾಂ
50 ಕೋಟಿಗೂ ಹೆಚ್ಚು ಜನರು ಕೃಷಿ ಕ್ಷೇತ್ರದಲ್ಲಿದ್ದಾರೆ , ಜಿಡಿಪಿಗೆ ಕೃಷಿಯ ಕೊಡುಗೆ ಶೇಕಡಾ 18
May 24, 2025
10:37 AM
by: The Rural Mirror ಸುದ್ದಿಜಾಲ
ಅಡಿಕೆ ಹಾಳೆ ರಫ್ತು ನಿರ್ಬಂಧದ ಸಂಕಷ್ಟದಿಂದ ಪಾರಾಗಲು ಕೈಗೊಳ್ಳಬಹುದಾದ ಪರಿಹಾರೋಪಾಯಗಳು
May 24, 2025
9:56 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಅಡಿಕೆ ಎನ್ನುವ ಚಿನ್ನದ ಮೊಟ್ಟೆ ಇಡುವ ಕೋಳಿ | ವರವೋ ಶಾಪವೋ?
May 24, 2025
9:13 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

You cannot copy content of this page - Copyright -The Rural Mirror

Join Our Group