ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಮಾ.28 ರಂದು ವಾಣಿಜ್ಯ ವ್ಯವಹಾರಗಳನ್ನು ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಜಿಲ್ಲಾದಿಕಾರಿಗಳ ಪ್ರಕಟಣೆ ತಿಳಿಸಿದೆ.
ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಈಗಾಗಲೇ 7 ಕೊರೊನಾ ವೈರಸ್ ಸೋಂಕಿತರ ಪ್ರಕರಣ ಪತ್ತೆಯಾಗಿದೆ. ನೆರೆಯ ಕಾಸರಗೋಡು, ಉತ್ತರಕನ್ನಡ ಜಿಲ್ಲೆಯಲ್ಲೂ ಪಾಸಿಟಿವ್ ಪ್ರಕರಣ ಏರಿಕೆಯಾಗುತ್ತಿದೆ. ಜಿಲ್ಲೆಯಲ್ಲಿ ಸಾರ್ವಜನಿಕ ಓಡಾಟ ನಿರ್ಬಂಧಿಸಿದೇ ಇದ್ದರೆ ಮುಂದಿನ ದಿನ ಇನ್ನಷ್ಟು ಅಪಾಯಕಾರಿಯಾಗಿದೆ. ಜನರ ಉತ್ತಮ ಭವಿಷ್ಯಕ್ಕಾಗಿ ಕೈಗೊಳ್ಳುವ ಈ ನಿರ್ಧಾರವನ್ನು ಎಲ್ಲರೂ ಬೆಂಬಲಿಸಬೇಕು. ಸಾರ್ವಜನಿಕರ ಆರೋಗ್ಯದ ಸುರಕ್ಷತೆಯ ದೃಷ್ಟಿಯಿಂದ ಈ ನಿರ್ಧಾರ ಅನಿವಾರ್ಯವಾಗಿದೆ. ಪ್ರತಿಯಿಬ್ಬರೂ ಮನೆಯಲ್ಲಿ ಕೂತು ಸಾಮಾಜಿಕ ಅಂತರ ಕಾಪಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳಲು ಪ್ರಧಾನಿಗಳು, ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ದಕ ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಚಟುವಟಿಕೆ ವಾಣಿಜ್ಯ ವ್ಯವಹಾರಗಳನ್ನು , ಅಂಗಡಿಗಳನ್ನು ಸಂಪೂರ್ಣ ಬಂದ್ ಮಾಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಜಿ್ಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಸಭೆಯಲ್ಲಿ ಸಂಸದರು, ಶಾಸಕರು, ಜಿಪಂ ಅಧ್ಯಕ್ಷರು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…
ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…
ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…
ಬಾಹ್ಯಕಾಶದಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…