ನವದೆಹಲಿ: ಕೊರೊನಾ ವೈರಸ್ ಹರಡುವುದು ತಡೆಯಲಿ ಈಗ ಲಾಕ್ ಡೌನ್ ನ್ನು ಪಾಲಿಸದಿದ್ದರೆ ಕೊರೋನಾ ವೈರಸ್ ವಿರುದ್ಧ ಬಚಾವಾಗಲು, ಅಪಾಯದಿಂದ ರಕ್ಷಿಸಿಕೊಳ್ಳಲು ಕಷ್ಟವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈಗಿನ ಪರಿಸ್ಥಿತಿಯಲ್ಲಿ ಕೊರೋನಾ ವೈರಸ್ ವಿರುದ್ಧ ಹೋರಾಟ ಮಾಡುವುದೆಂದರೆ ಸಾವು, ಬದುಕಿನ ನಡುವೆ ನಡೆಸುತ್ತಿರುವ ಹೋರಾಟ, ಹೀಗಾಗಿ ಸಂಪೂರ್ಣ ಬಂದ್ ಅನಿವಾರ್ಯವಾಗಿದೆ. ಈ ಸಂದರ್ಭದಲ್ಲಿ ಯಾರು ಕೂಡ ಕಾನೂನನ್ನು ಬೇಕೆಂದೇ ದುರುದ್ದೇಶಪೂರ್ವಕವಾಗಿ ಮುರಿಯಲು ನೋಡುವುದಿಲ್ಲ, ಆದರೂ ಕೆಲವರು ನಿಯಮ ಮುರಿಯಲು ನೋಡುತ್ತಿದ್ದಾರೆ. ದಯವಿಟ್ಟು ಈ ಕೆಲಸ ಮಾಡಬೇಡಿ ಎಂದ ಪ್ರಧಾನಿ ಈ ರೀತಿಯ ಕಠಿಣ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಕ್ಷಮೆ ಕೇಳುತ್ತೇನೆ. ಬಡವರಿಗೆ ನನ್ನ ಮೇಲೆ ಕೋಪ ಬಂದಿದೆ. ಏಕೆ ಈ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಕೊರೊನಾ ವೈರಸ್ ವಿರುದ್ಧ ಹೋರಾಡಲು ಬೇರೆ ದಾರಿಯೇ ಇರಲಿಲ್ಲ. ಆದರೆ, ಬೇರೆ ದೇಶಗಳ ಸ್ಥಿತಿ ನೋಡಿದಾಗ ಈ ರೀತಿಯ ಕ್ರಮ ಸರಿ ಎನ್ನಿಸುತ್ತದೆ. ಭಾರತೀಯರ ಸುರಕ್ಷತೆ ನಮಗೆ ಮುಖ್ಯವಾಗಿದೆ ಎಂದರು.
ಸಾಕಷ್ಟು ಜನರು ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿದ್ದಾರೆ. ವೈದ್ಯರು, ನರ್ಸ್ಗಳು ಮತ್ತು ಔಷಧಾಲಯದವರು ಕೊರೊನಾ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಇವರು ಮೊದಲ ಸಾಲಿನ ಸೈನಿಕರು ಎಂದು ಅಭಿನಂದಿಸಿದರು.
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…
ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಇಂದಿನಿಂದ ಮಳೆ ಆರಂಭವಾಗಲಿದೆ. ಅಲ್ಲಲ್ಲಿ ಸಾಧಾರಣ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರವ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕತೆ 9535156490
ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…