ನವದೆಹಲಿ: ಕೊರೊನಾ ವೈರಸ್ ಹರಡುವುದು ತಡೆಯಲಿ ಈಗ ಲಾಕ್ ಡೌನ್ ನ್ನು ಪಾಲಿಸದಿದ್ದರೆ ಕೊರೋನಾ ವೈರಸ್ ವಿರುದ್ಧ ಬಚಾವಾಗಲು, ಅಪಾಯದಿಂದ ರಕ್ಷಿಸಿಕೊಳ್ಳಲು ಕಷ್ಟವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈಗಿನ ಪರಿಸ್ಥಿತಿಯಲ್ಲಿ ಕೊರೋನಾ ವೈರಸ್ ವಿರುದ್ಧ ಹೋರಾಟ ಮಾಡುವುದೆಂದರೆ ಸಾವು, ಬದುಕಿನ ನಡುವೆ ನಡೆಸುತ್ತಿರುವ ಹೋರಾಟ, ಹೀಗಾಗಿ ಸಂಪೂರ್ಣ ಬಂದ್ ಅನಿವಾರ್ಯವಾಗಿದೆ. ಈ ಸಂದರ್ಭದಲ್ಲಿ ಯಾರು ಕೂಡ ಕಾನೂನನ್ನು ಬೇಕೆಂದೇ ದುರುದ್ದೇಶಪೂರ್ವಕವಾಗಿ ಮುರಿಯಲು ನೋಡುವುದಿಲ್ಲ, ಆದರೂ ಕೆಲವರು ನಿಯಮ ಮುರಿಯಲು ನೋಡುತ್ತಿದ್ದಾರೆ. ದಯವಿಟ್ಟು ಈ ಕೆಲಸ ಮಾಡಬೇಡಿ ಎಂದ ಪ್ರಧಾನಿ ಈ ರೀತಿಯ ಕಠಿಣ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಕ್ಷಮೆ ಕೇಳುತ್ತೇನೆ. ಬಡವರಿಗೆ ನನ್ನ ಮೇಲೆ ಕೋಪ ಬಂದಿದೆ. ಏಕೆ ಈ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಕೊರೊನಾ ವೈರಸ್ ವಿರುದ್ಧ ಹೋರಾಡಲು ಬೇರೆ ದಾರಿಯೇ ಇರಲಿಲ್ಲ. ಆದರೆ, ಬೇರೆ ದೇಶಗಳ ಸ್ಥಿತಿ ನೋಡಿದಾಗ ಈ ರೀತಿಯ ಕ್ರಮ ಸರಿ ಎನ್ನಿಸುತ್ತದೆ. ಭಾರತೀಯರ ಸುರಕ್ಷತೆ ನಮಗೆ ಮುಖ್ಯವಾಗಿದೆ ಎಂದರು.
ಸಾಕಷ್ಟು ಜನರು ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿದ್ದಾರೆ. ವೈದ್ಯರು, ನರ್ಸ್ಗಳು ಮತ್ತು ಔಷಧಾಲಯದವರು ಕೊರೊನಾ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಇವರು ಮೊದಲ ಸಾಲಿನ ಸೈನಿಕರು ಎಂದು ಅಭಿನಂದಿಸಿದರು.
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…
ಉತ್ತರ ಕನ್ನಡದಲ್ಲಿ ಎಲೆಚುಕ್ಕಿ ರೋಗದಿಂದ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರಿಗೆ ಸಾಲ ಮರುಪಾವತಿ ಅವಧಿ…
ಭಾರತದ ಕೃಷಿಯಲ್ಲಿ ಮಹಿಳೆಯರ ಪಾತ್ರ ದಿನೇದಿನೇ ಹೆಚ್ಚುತ್ತಿದೆ. ಸಂಪನ್ಮೂಲ ಹಾಗೂ ನಾಯಕತ್ವ ಅವಕಾಶ…
ಸಾಂಪ್ರದಾಯಿಕ ಗ್ರಾಮೀಣ ತಿನಿಸು ಉಪ್ಪು ಸೊಳೆ ಬೋಳು ಬೆಂದಿ. ಸರಳ ಪದಾರ್ಥಗಳಿಂದ ಸುಲಭವಾಗಿ…
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…