ನವದೆಹಲಿ: ಕೊರೊನಾ ವೈರಸ್ ಹರಡುವುದು ತಡೆಯಲಿ ಈಗ ಲಾಕ್ ಡೌನ್ ನ್ನು ಪಾಲಿಸದಿದ್ದರೆ ಕೊರೋನಾ ವೈರಸ್ ವಿರುದ್ಧ ಬಚಾವಾಗಲು, ಅಪಾಯದಿಂದ ರಕ್ಷಿಸಿಕೊಳ್ಳಲು ಕಷ್ಟವಾಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಈಗಿನ ಪರಿಸ್ಥಿತಿಯಲ್ಲಿ ಕೊರೋನಾ ವೈರಸ್ ವಿರುದ್ಧ ಹೋರಾಟ ಮಾಡುವುದೆಂದರೆ ಸಾವು, ಬದುಕಿನ ನಡುವೆ ನಡೆಸುತ್ತಿರುವ ಹೋರಾಟ, ಹೀಗಾಗಿ ಸಂಪೂರ್ಣ ಬಂದ್ ಅನಿವಾರ್ಯವಾಗಿದೆ. ಈ ಸಂದರ್ಭದಲ್ಲಿ ಯಾರು ಕೂಡ ಕಾನೂನನ್ನು ಬೇಕೆಂದೇ ದುರುದ್ದೇಶಪೂರ್ವಕವಾಗಿ ಮುರಿಯಲು ನೋಡುವುದಿಲ್ಲ, ಆದರೂ ಕೆಲವರು ನಿಯಮ ಮುರಿಯಲು ನೋಡುತ್ತಿದ್ದಾರೆ. ದಯವಿಟ್ಟು ಈ ಕೆಲಸ ಮಾಡಬೇಡಿ ಎಂದ ಪ್ರಧಾನಿ ಈ ರೀತಿಯ ಕಠಿಣ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಕ್ಷಮೆ ಕೇಳುತ್ತೇನೆ. ಬಡವರಿಗೆ ನನ್ನ ಮೇಲೆ ಕೋಪ ಬಂದಿದೆ. ಏಕೆ ಈ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ. ಕೊರೊನಾ ವೈರಸ್ ವಿರುದ್ಧ ಹೋರಾಡಲು ಬೇರೆ ದಾರಿಯೇ ಇರಲಿಲ್ಲ. ಆದರೆ, ಬೇರೆ ದೇಶಗಳ ಸ್ಥಿತಿ ನೋಡಿದಾಗ ಈ ರೀತಿಯ ಕ್ರಮ ಸರಿ ಎನ್ನಿಸುತ್ತದೆ. ಭಾರತೀಯರ ಸುರಕ್ಷತೆ ನಮಗೆ ಮುಖ್ಯವಾಗಿದೆ ಎಂದರು.
ಸಾಕಷ್ಟು ಜನರು ಕೊರೋನಾ ವೈರಸ್ ವಿರುದ್ಧ ಹೋರಾಡುತ್ತಿದ್ದಾರೆ. ವೈದ್ಯರು, ನರ್ಸ್ಗಳು ಮತ್ತು ಔಷಧಾಲಯದವರು ಕೊರೊನಾ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಇವರು ಮೊದಲ ಸಾಲಿನ ಸೈನಿಕರು ಎಂದು ಅಭಿನಂದಿಸಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…