ಸುಳ್ಯ: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾ.28 – ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೆಡಿಕಲ್ ಹಾಗೂ ವೈದ್ಯಕೀಯ ಸೇವೆ ಹೊರತುಪಡಿಸಿ ಎಲ್ಲವೂ ಸ್ತಬ್ಧವಾಗಲಿದೆ. ದಿನಸಿ ಖರೀದಿಗೂ ಇಂದು ಅವಕಾಶ ಇಲ್ಲ.
ಇಂದು ಜನ ಪೇಟೆಗೆ ಬಂದರೆ ಪೊಲೀಸರು ಲಾಠಿ ಬೀಸುತ್ತಾರೆ. ಯಾವುದೇ ಕಾರಣಕ್ಕೂ ಯಾರೊಬ್ಬರೂ ರಸ್ತೆಗೆ ಇಳಿಯಬಾರದು ಎಂದು ಖಡಕ್ ಸೂಚನೆ ಜಿಲ್ಲಾಡಳಿತ ನೀಡಿದೆ. ಜಿಲ್ಲೆಯ ಜನರ ಆರೋಗ್ಯದ ಕಾರಣದಿಂದ ಈ ಕ್ರಮ ಅನಿವಾರ್ಯವಾಗಿ ತೆಗೆದುಕೊಳ್ಳಲಾಗಿದೆ. ಇಷ್ಟೂ ಮೀರಿ ರಸ್ತೆಗೆ ಬಂದರೆ ಪೊಲೀಸ್ ಲಾಠಿ ಏಟು ತಿನ್ನಲು ಇಂದು ಸಜ್ಜಾಗಿ.
ಸುಳ್ಯ ತಾಲೂಕಿನ ವಿವಿದೆಡೆ ಬೆಳಗ್ಗೆ 5.30 ರಿಂದಲೇ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಸುಳ್ಯ ತಾಲೂಕಿನ ಬಳ್ಪದಲ್ಲಿ ಜನ ಸೇರಿದ್ದು ಪೊಲೀಸರು ಲಾಠಿ ಬೀಸಿದ್ದಾರೆ. ಯಾವುದೇ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಹಾಲು ಖರೀದಿಗೆ ಇಂದು ಅವಕಾಶ ಇಲ್ಲ.
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…
ಐದು ವರ್ಷದ ದತ್ತಾಂಶವು ಮಂಗಳೂರು ಅಡಿಕೆ ಮಾರುಕಟ್ಟೆ ಚಕ್ರಾಕಾರ ಸ್ವಭಾವ ಹೊಂದಿರುವುದನ್ನು ತೋರಿಸಿದೆ.…