ಸುಳ್ಯ: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾ.28 – ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೆಡಿಕಲ್ ಹಾಗೂ ವೈದ್ಯಕೀಯ ಸೇವೆ ಹೊರತುಪಡಿಸಿ ಎಲ್ಲವೂ ಸ್ತಬ್ಧವಾಗಲಿದೆ. ದಿನಸಿ ಖರೀದಿಗೂ ಇಂದು ಅವಕಾಶ ಇಲ್ಲ.
ಇಂದು ಜನ ಪೇಟೆಗೆ ಬಂದರೆ ಪೊಲೀಸರು ಲಾಠಿ ಬೀಸುತ್ತಾರೆ. ಯಾವುದೇ ಕಾರಣಕ್ಕೂ ಯಾರೊಬ್ಬರೂ ರಸ್ತೆಗೆ ಇಳಿಯಬಾರದು ಎಂದು ಖಡಕ್ ಸೂಚನೆ ಜಿಲ್ಲಾಡಳಿತ ನೀಡಿದೆ. ಜಿಲ್ಲೆಯ ಜನರ ಆರೋಗ್ಯದ ಕಾರಣದಿಂದ ಈ ಕ್ರಮ ಅನಿವಾರ್ಯವಾಗಿ ತೆಗೆದುಕೊಳ್ಳಲಾಗಿದೆ. ಇಷ್ಟೂ ಮೀರಿ ರಸ್ತೆಗೆ ಬಂದರೆ ಪೊಲೀಸ್ ಲಾಠಿ ಏಟು ತಿನ್ನಲು ಇಂದು ಸಜ್ಜಾಗಿ.
ಸುಳ್ಯ ತಾಲೂಕಿನ ವಿವಿದೆಡೆ ಬೆಳಗ್ಗೆ 5.30 ರಿಂದಲೇ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಸುಳ್ಯ ತಾಲೂಕಿನ ಬಳ್ಪದಲ್ಲಿ ಜನ ಸೇರಿದ್ದು ಪೊಲೀಸರು ಲಾಠಿ ಬೀಸಿದ್ದಾರೆ. ಯಾವುದೇ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಹಾಲು ಖರೀದಿಗೆ ಇಂದು ಅವಕಾಶ ಇಲ್ಲ.
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…