ಸುಳ್ಯ: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾ.28 – ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೆಡಿಕಲ್ ಹಾಗೂ ವೈದ್ಯಕೀಯ ಸೇವೆ ಹೊರತುಪಡಿಸಿ ಎಲ್ಲವೂ ಸ್ತಬ್ಧವಾಗಲಿದೆ. ದಿನಸಿ ಖರೀದಿಗೂ ಇಂದು ಅವಕಾಶ ಇಲ್ಲ.
ಇಂದು ಜನ ಪೇಟೆಗೆ ಬಂದರೆ ಪೊಲೀಸರು ಲಾಠಿ ಬೀಸುತ್ತಾರೆ. ಯಾವುದೇ ಕಾರಣಕ್ಕೂ ಯಾರೊಬ್ಬರೂ ರಸ್ತೆಗೆ ಇಳಿಯಬಾರದು ಎಂದು ಖಡಕ್ ಸೂಚನೆ ಜಿಲ್ಲಾಡಳಿತ ನೀಡಿದೆ. ಜಿಲ್ಲೆಯ ಜನರ ಆರೋಗ್ಯದ ಕಾರಣದಿಂದ ಈ ಕ್ರಮ ಅನಿವಾರ್ಯವಾಗಿ ತೆಗೆದುಕೊಳ್ಳಲಾಗಿದೆ. ಇಷ್ಟೂ ಮೀರಿ ರಸ್ತೆಗೆ ಬಂದರೆ ಪೊಲೀಸ್ ಲಾಠಿ ಏಟು ತಿನ್ನಲು ಇಂದು ಸಜ್ಜಾಗಿ.
ಸುಳ್ಯ ತಾಲೂಕಿನ ವಿವಿದೆಡೆ ಬೆಳಗ್ಗೆ 5.30 ರಿಂದಲೇ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಸುಳ್ಯ ತಾಲೂಕಿನ ಬಳ್ಪದಲ್ಲಿ ಜನ ಸೇರಿದ್ದು ಪೊಲೀಸರು ಲಾಠಿ ಬೀಸಿದ್ದಾರೆ. ಯಾವುದೇ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಹಾಲು ಖರೀದಿಗೆ ಇಂದು ಅವಕಾಶ ಇಲ್ಲ.
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…
ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…
ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…
ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…
2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…