ಸುದ್ದಿಗಳು

#ಕೊರೊನಾ ಲಾಕ್ಡೌನ್ | ಶನಿವಾರ ದಕ ಜಿಲ್ಲೆ ಸಂಪೂರ್ಣ ಸ್ತಬ್ಧ | ಲಾಠಿ ರುಚಿ ಬೇಕಿದ್ದರೆ ರಸ್ತೆಗೆ ಬನ್ನಿ |

Share

ಸುಳ್ಯ: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಪ್ರದೇಶದಲ್ಲಿ  ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾ.28 – ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೆಡಿಕಲ್ ಹಾಗೂ ವೈದ್ಯಕೀಯ ಸೇವೆ ಹೊರತುಪಡಿಸಿ ಎಲ್ಲವೂ ಸ್ತಬ್ಧವಾಗಲಿದೆ. ದಿನಸಿ ಖರೀದಿಗೂ ಇಂದು ಅವಕಾಶ ಇಲ್ಲ.

ಇಂದು ಜನ ಪೇಟೆಗೆ ಬಂದರೆ ಪೊಲೀಸರು ಲಾಠಿ ಬೀಸುತ್ತಾರೆ. ಯಾವುದೇ ಕಾರಣಕ್ಕೂ ಯಾರೊಬ್ಬರೂ ರಸ್ತೆಗೆ ಇಳಿಯಬಾರದು ಎಂದು ಖಡಕ್ ಸೂಚನೆ ಜಿಲ್ಲಾಡಳಿತ ನೀಡಿದೆ. ಜಿಲ್ಲೆಯ ಜನರ ಆರೋಗ್ಯದ ಕಾರಣದಿಂದ ಈ ಕ್ರಮ ಅನಿವಾರ್ಯವಾಗಿ ತೆಗೆದುಕೊಳ್ಳಲಾಗಿದೆ. ಇಷ್ಟೂ ಮೀರಿ ರಸ್ತೆಗೆ ಬಂದರೆ ಪೊಲೀಸ್ ಲಾಠಿ ಏಟು ತಿನ್ನಲು ಇಂದು ಸಜ್ಜಾಗಿ.

ಸುಳ್ಯ ತಾಲೂಕಿನ ವಿವಿದೆಡೆ ಬೆಳಗ್ಗೆ 5.30 ರಿಂದಲೇ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಸುಳ್ಯ ತಾಲೂಕಿನ  ಬಳ್ಪದಲ್ಲಿ ಜನ ಸೇರಿದ್ದು ಪೊಲೀಸರು ಲಾಠಿ ಬೀಸಿದ್ದಾರೆ. ಯಾವುದೇ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಹಾಲು ಖರೀದಿಗೆ ಇಂದು ಅವಕಾಶ ಇಲ್ಲ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಿಕ್ಕಮಗಳೂರು ಜಿಲ್ಲೆ | ಮಂಗನ ಕಾಯಿಲೆ ಸೋಂಕಿಗೆ ವೃದ್ಧೆ ಬಲಿ | ಮಂಗನಕಾಯಿಲೆ ಬಗ್ಗೆ ಇರಲಿ ಎಚ್ಚರ |

ಮಂಗನಕಾಯಿಲೆ ಸೋಂಕು ಮಲೆನಾಡು ಕಡೆಗಳಲ್ಲಿ ಹೆಚ್ಚಾಗಿ ಕಾಣಿಸುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಕೆಲವು ಕಡೆ…

11 minutes ago

ಅಮೆರಿಕದ ಹಲವು ರಾಜ್ಯಗಳಲ್ಲಿ ಚಂಡಮಾರುತ-ಸುಳಿಗಾಳಿ; ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿ

ಅಮೆರಿಕದ  ಹಲವು ರಾಜ್ಯಗಳಲ್ಲಿ  ಅತ್ಯಂತ ಪ್ರಬಲ ಚಂಡಮಾರುತ ಹಾಗೂ  ಸುಳಿಗಾಳಿ ಉಂಟಾಗಿದ್ದು,  ಈವರೆಗೆ…

45 minutes ago

ಉತ್ತರ ಒಳನಾಡಿನಲ್ಲಿ ಬಿಸಿಹವೆ – ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾ. 20 ರವರೆಗೆ ಬಿಸಿ ಗಾಳಿ ಬೀಸುವ…

1 hour ago

ಕಾಶ್ಮೀರದಲ್ಲಿ ಹಿಮಪಾತ ಆರಂಭ | ಮಧ್ಯಭಾರತ ಹಾಗೂ  ಉತ್ತರ ಭಾರತದಲ್ಲಿ  ತಾಪಮಾನ ಗಣನೀಯ ಪ್ರಮಾಣದಲ್ಲಿ  ಏರಿಕೆ

ಕಣಿವೆ ರಾಜ್ಯ  ಕಾಶ್ಮೀರದಲ್ಲಿ  ಹಿಮಪಾತ  ಆರಂಭವಾಗಿದೆ.   ಕಾಶ್ಮೀರದ  ಹಲವು ಭಾಗಗಳಲ್ಲಿ ಎರಡು ದಿನಗಳ…

1 hour ago

ಹವಾಮಾನ ವರದಿ | 18-03-2025 | ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ | ಮಾ.25 ರ ನಂತರ ವಿವಿದೆಡೆ ಮಳೆ ಸಾಧ್ಯತೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ, ಬೆಳ್ತಂಗಡಿ ಸುತ್ತಮುತ್ತ ಭಾಗಗಳಲ್ಲಿ, ಕೊಡಗು ಜಿಲ್ಲೆಯ…

7 hours ago