ಸುಳ್ಯ: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾ.28 – ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೆಡಿಕಲ್ ಹಾಗೂ ವೈದ್ಯಕೀಯ ಸೇವೆ ಹೊರತುಪಡಿಸಿ ಎಲ್ಲವೂ ಸ್ತಬ್ಧವಾಗಲಿದೆ. ದಿನಸಿ ಖರೀದಿಗೂ ಇಂದು ಅವಕಾಶ ಇಲ್ಲ.
ಇಂದು ಜನ ಪೇಟೆಗೆ ಬಂದರೆ ಪೊಲೀಸರು ಲಾಠಿ ಬೀಸುತ್ತಾರೆ. ಯಾವುದೇ ಕಾರಣಕ್ಕೂ ಯಾರೊಬ್ಬರೂ ರಸ್ತೆಗೆ ಇಳಿಯಬಾರದು ಎಂದು ಖಡಕ್ ಸೂಚನೆ ಜಿಲ್ಲಾಡಳಿತ ನೀಡಿದೆ. ಜಿಲ್ಲೆಯ ಜನರ ಆರೋಗ್ಯದ ಕಾರಣದಿಂದ ಈ ಕ್ರಮ ಅನಿವಾರ್ಯವಾಗಿ ತೆಗೆದುಕೊಳ್ಳಲಾಗಿದೆ. ಇಷ್ಟೂ ಮೀರಿ ರಸ್ತೆಗೆ ಬಂದರೆ ಪೊಲೀಸ್ ಲಾಠಿ ಏಟು ತಿನ್ನಲು ಇಂದು ಸಜ್ಜಾಗಿ.
ಸುಳ್ಯ ತಾಲೂಕಿನ ವಿವಿದೆಡೆ ಬೆಳಗ್ಗೆ 5.30 ರಿಂದಲೇ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಸುಳ್ಯ ತಾಲೂಕಿನ ಬಳ್ಪದಲ್ಲಿ ಜನ ಸೇರಿದ್ದು ಪೊಲೀಸರು ಲಾಠಿ ಬೀಸಿದ್ದಾರೆ. ಯಾವುದೇ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಹಾಲು ಖರೀದಿಗೆ ಇಂದು ಅವಕಾಶ ಇಲ್ಲ.
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…