ಸುಳ್ಯ: ದಕ್ಷಿಣ ಕನ್ನಡ ಹಾಗೂ ಕಾಸರಗೋಡು ಪ್ರದೇಶದಲ್ಲಿ ಕೊರೊನಾ ವೈರಸ್ ಸೋಂಕು ಪಾಸಿಟಿವ್ ಪ್ರಕರಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಮಾ.28 – ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮೆಡಿಕಲ್ ಹಾಗೂ ವೈದ್ಯಕೀಯ ಸೇವೆ ಹೊರತುಪಡಿಸಿ ಎಲ್ಲವೂ ಸ್ತಬ್ಧವಾಗಲಿದೆ. ದಿನಸಿ ಖರೀದಿಗೂ ಇಂದು ಅವಕಾಶ ಇಲ್ಲ.
ಇಂದು ಜನ ಪೇಟೆಗೆ ಬಂದರೆ ಪೊಲೀಸರು ಲಾಠಿ ಬೀಸುತ್ತಾರೆ. ಯಾವುದೇ ಕಾರಣಕ್ಕೂ ಯಾರೊಬ್ಬರೂ ರಸ್ತೆಗೆ ಇಳಿಯಬಾರದು ಎಂದು ಖಡಕ್ ಸೂಚನೆ ಜಿಲ್ಲಾಡಳಿತ ನೀಡಿದೆ. ಜಿಲ್ಲೆಯ ಜನರ ಆರೋಗ್ಯದ ಕಾರಣದಿಂದ ಈ ಕ್ರಮ ಅನಿವಾರ್ಯವಾಗಿ ತೆಗೆದುಕೊಳ್ಳಲಾಗಿದೆ. ಇಷ್ಟೂ ಮೀರಿ ರಸ್ತೆಗೆ ಬಂದರೆ ಪೊಲೀಸ್ ಲಾಠಿ ಏಟು ತಿನ್ನಲು ಇಂದು ಸಜ್ಜಾಗಿ.
ಸುಳ್ಯ ತಾಲೂಕಿನ ವಿವಿದೆಡೆ ಬೆಳಗ್ಗೆ 5.30 ರಿಂದಲೇ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಸುಳ್ಯ ತಾಲೂಕಿನ ಬಳ್ಪದಲ್ಲಿ ಜನ ಸೇರಿದ್ದು ಪೊಲೀಸರು ಲಾಠಿ ಬೀಸಿದ್ದಾರೆ. ಯಾವುದೇ ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ ಹಾಲು ಖರೀದಿಗೆ ಇಂದು ಅವಕಾಶ ಇಲ್ಲ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…