ಸುದ್ದಿಗಳು

#ಕೊರೊನಾ ಲಾಕ್ಡೌನ್ | ಸುಳ್ಯದಲ್ಲಿ ಹೇಗಿತ್ತು ಶುಕ್ರವಾರ | 12 ಗಂಟೆಗೆ ದಿನಸಿ ತರಕಾರಿ-ಅಂಗಡಿಗಳು ಬಂದ್ | ಸಾಮಾಜಿಕ ಅಂತರದತ್ತ ಗಮನ |

Share

ಸುಳ್ಯ: ಸುಳ್ಯ ತಾಲೂಕಿನಾದ್ಯಂತ ಶುಕ್ರವಾರವೂ ಯಾವುದೇ ಸಮಸ್ಯೆ ಆಗಲಿಲ್ಲ. ಜನಜೀವನಕ್ಕೆ ತೊಂದರೆಯಾಗಲಿಲ್ಲ. ಜನರಿಗೆ ಅಗತ್ಯ ಸಾಮಾಗ್ರಿಗಳು ಮಧ್ಯಾಹ್ನ 12 ಗಂಟೆಯವರೆಗೆ ಲಭ್ಯವಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು  ಸ್ಥಳೀಯಾಡಳಿತ ಹಾಗೂ ಸ್ವಯಂಸೇವಾ ಕಾರ್ಯಕರ್ತರು ವ್ಯವಸ್ಥೆ ಮಾಡಿದ್ದರು

ಗ್ರಾಮೀಣ ಭಾಗದಲ್ಲಿ  ಕೂಡಾ ದಿನಸಿ ಅಂಗಡಿಗಳ ಮುಂದೆ, ಹಾಲಿನ ಡೈರಿಗಳ ಮುಂದೆ, ತರಕಾರಿ ಅಂಗಡಿಗಳ ಮುಂದೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಸಾಕಷ್ಟು ಅಂತರದಲ್ಲಿ ಮಾಡಿರುವ ಮಾರ್ಕ್ ನಲ್ಲಿ ನಿಂತು ಕ್ಯೂ ಮೂಲಕ ಸಾಗಿ ದಿನಸಿ ಸಾಮಾಗ್ರಿ ಖರೀದಿ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಗ್ಯಾಸ್ ಸಹಿತ ಅಗತ್ಯ ಸೇವೆಗಳು ಪ್ರತೀ ದಿನ 12 ಗಂಟೆಯವರೆಗೆ ತೆರೆದಿರುತ್ತದೆ. ಸರಿಯಾಗಿ 12 ಗಂಟೆಗೆ ಎಲ್ಲಾ ಅಂಗಡಿಗಳು ಬಂದ್ ಆಗುತ್ತವೆ. ಸುಳ್ಯದಲ್ಲಿ ಸಮಯ ಮುಗಿಯುತ್ತಿದ್ದಂತೆಯೇ ಪೊಲೀಸರು ಸೈರನ್ ಮೊಳಗಿಸುತ್ತಾರೆ. ಸಾರ್ವಜನಿಕರು ಮನೆಯಿಂದ ಒಬ್ಬರು ಮಾತ್ರವೇ ವಾರಕ್ಕೆ ಅಗತ್ಯಕ್ಕೆ ಬೇಕಾದಷ್ಟು ದಿನಸಿ ಸಾಮಾಗ್ರಿ ಕೊಂಡೊಯ್ಯ ಬಹುದುದಾಗಿದೆ. ಆದರೆ ಅದೇ ನೆಪದಲ್ಲಿ  ಪ್ರತೀ ದಿನವೂ ಪೇಟೆಗೆ ಬಂದರೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಹೀಗಾಗಿ ಸಾರ್ವಜನಿಕರು ಇದನ್ನು ಗಮನಿಸಿಕೊಳ್ಳಬೇಕಾಗಿದೆ.

 

ತರಕಾರಿ ಅಂಗಡಿಗಳ ಮುಂದೆ

 

 ಎಲ್ಲೆಲ್ಲೆ ಹೇಗಿತ್ತು ?

ಗ್ರಾಮೀಣ ಭಾಗದವರೆಗೂ ದಿನಸಿಯಲ್ಲಿ  ಕೊರತೆ ಕಂಡುಬರಲಿಲ್ಲ. ಪೂರೈಕೆಯಿತ್ತು. ಕೆಲವು ಕಡೆ ದಿನಸಿ ಸರಬರಾಜಿಗೆ ವ್ಯವಸ್ಥೆ ಮಾಡದ ಕಾರಣ  ದಿನಸಿ ವಸ್ತುಗಳ ಕೊರತೆ ಇತ್ತು. ದಿನಸಿ ಸಾಗಾಟಕ್ಕೆ ಅನುಮತಿ ಇದೆ. ಇದರ ವ್ಯವಸ್ಥೆಯಲ್ಲಿ  ಸ್ಥಳೀಯಾಡಳಿತದ ಜೊತೆ ಮಾತುಕತೆ ನಡೆಸಿ ಮಾಡಿಕೊಳ್ಳಬಹುದಾಗಿದೆ. ಸುಳ್ಯದಲ್ಲಿ ಜನ ಸಂದಣಿ ತಪ್ಪಿಸಲು 3 ವಿಭಾಗ ಮಾಡಿ ಬೆಳಗ್ಗೆ 6 ರಿಂದ 8 , 8 ರಿಂದ 10 ಹಾಗೂ 10 -12 ಗಂಟೆಯವರೆಗೆ ದಿನಸಿ ಖರೀದಿಗೆ ಪೊಲೀಸರು ಅವಕಾಶ ಮಾಡಕೊಟ್ಟಿದ್ದಾರೆ.

 

ಗ್ರಾಮೀಣ ಭಾಗದ ದಿನಸಿ ಅಂಗಡಿಗಳ ಮುಂದೆಯೂ ಮಾರ್ಕಿಂಗ್ ವ್ಯವಸ್ಥೆ

 

ಬಳ್ಪದ ಬೀದಿಗುಡ್ಡೆಯಲ್ಲಿ  ಮಿತ್ರ ಬಳಗದ  ಯುವಕರ ತಂಡ ಸಾರ್ವಜನಿಕರಿಗೆ ಅಗತ್ಯವಿದ್ದರೆ ದಿನಸಿ ಸಾಮಾಗ್ರಿಗಳ ಪೂರೈಕೆಗೆ ವ್ಯವಸ್ಥೆ ಮಾಡುತ್ತಿದೆ.  ಬಾಳಿಲದಲ್ಲಿ ಕಾರ್ಯಪಡೆ ಸದಸ್ಯರು ಅಂಗಡಿಗಳ ಮುಂದೆ ಜನರು ಅಂತರ ಕಾಪಾಡಿಕೊಳ್ಳಲು ಬೇಕಾದ ಮಾರ್ಕ್ ವ್ಯವಸ್ಥೆ ಮಾಡಿದ್ದಾರೆ. ಪಂಬೆತ್ತಾಡಿಯಲ್ಲಿ ಸಹಕಾರಿ ಸಂಘದ ನಿರ್ದೇಶಕರ ನೇತೃತ್ವದಲ್ಲಿ ತಮ್ಮ ಸ್ವಂತ  ವಾಹನದಲ್ಲಿ  ಜನರಿಗೆ ಅಗತ್ಯ ಸಾಮಾಗ್ರಿಗಳ ಸಾಗಾಟಕ್ಕೆ ಸಹಕರಿಸಿದರು.

ಸಂಪಾಜೆಯಲ್ಲಿ  ಬಿಗಿಬಂದೋಬಸ್ತ್ : ಜಿಲ್ಲಾ ಗಡಿಭಾಗವಾದ ಸಂಪಾಜೆಯಲ್ಲಿ ತಪಾಸಣೆ ಬಿಗುಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ಜಿಲ್ಲೆಯ ನಡುವೆ ಅನಗತ್ಯ ಓಡಾಟ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ.

ಲಾಕ್ ಡೌನ್ ನಡುವೆ ಚಾರಣ : ರಾಜ್ಯ ಮಾತ್ರವಲ್ಲ ದೇಶವೇ ಕೊರೋನಾ ವೈರಸ್ ಹರಡುವುದು  ತಡೆಯಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿರುವಾಗ ಪೆರಾಜೆಯ ಕೋಳಿಕ್ಕಮಲೆಗೆ ಚಾರಣಕ್ಕೆ ಆಗಮಿಸಿದವರನ್ನು ಅರಣ್ಯ ಇಲಾಖೆಯ ಸಿಬಂದಿಗಳು ವಶಕ್ಕೆ ಪಡೆದು ಮನೆಗೆ ಕಳುಹಿಸಿದ್ದಾರೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…

18 hours ago

ಸುನಿತಾ ವಿಲಿಯಮ್ಸ್ ಈ ಸಮಾಜಕ್ಕೆ ಸ್ಫೂರ್ತಿ ಏಕೆ…?

ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…

23 hours ago

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

1 day ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

1 day ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

1 day ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

1 day ago