Advertisement
ಸುದ್ದಿಗಳು

#ಕೊರೊನಾ ಲಾಕ್ಡೌನ್ | ಸುಳ್ಯದಲ್ಲಿ ಹೇಗಿತ್ತು ಶುಕ್ರವಾರ | 12 ಗಂಟೆಗೆ ದಿನಸಿ ತರಕಾರಿ-ಅಂಗಡಿಗಳು ಬಂದ್ | ಸಾಮಾಜಿಕ ಅಂತರದತ್ತ ಗಮನ |

Share

ಸುಳ್ಯ: ಸುಳ್ಯ ತಾಲೂಕಿನಾದ್ಯಂತ ಶುಕ್ರವಾರವೂ ಯಾವುದೇ ಸಮಸ್ಯೆ ಆಗಲಿಲ್ಲ. ಜನಜೀವನಕ್ಕೆ ತೊಂದರೆಯಾಗಲಿಲ್ಲ. ಜನರಿಗೆ ಅಗತ್ಯ ಸಾಮಾಗ್ರಿಗಳು ಮಧ್ಯಾಹ್ನ 12 ಗಂಟೆಯವರೆಗೆ ಲಭ್ಯವಿತ್ತು. ಸಾಮಾಜಿಕ ಅಂತರ ಕಾಯ್ದುಕೊಳ್ಳಲು  ಸ್ಥಳೀಯಾಡಳಿತ ಹಾಗೂ ಸ್ವಯಂಸೇವಾ ಕಾರ್ಯಕರ್ತರು ವ್ಯವಸ್ಥೆ ಮಾಡಿದ್ದರು

ಗ್ರಾಮೀಣ ಭಾಗದಲ್ಲಿ  ಕೂಡಾ ದಿನಸಿ ಅಂಗಡಿಗಳ ಮುಂದೆ, ಹಾಲಿನ ಡೈರಿಗಳ ಮುಂದೆ, ತರಕಾರಿ ಅಂಗಡಿಗಳ ಮುಂದೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವ್ಯವಸ್ಥೆ ಮಾಡಲಾಗಿತ್ತು. ಸಾಕಷ್ಟು ಅಂತರದಲ್ಲಿ ಮಾಡಿರುವ ಮಾರ್ಕ್ ನಲ್ಲಿ ನಿಂತು ಕ್ಯೂ ಮೂಲಕ ಸಾಗಿ ದಿನಸಿ ಸಾಮಾಗ್ರಿ ಖರೀದಿ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಗ್ಯಾಸ್ ಸಹಿತ ಅಗತ್ಯ ಸೇವೆಗಳು ಪ್ರತೀ ದಿನ 12 ಗಂಟೆಯವರೆಗೆ ತೆರೆದಿರುತ್ತದೆ. ಸರಿಯಾಗಿ 12 ಗಂಟೆಗೆ ಎಲ್ಲಾ ಅಂಗಡಿಗಳು ಬಂದ್ ಆಗುತ್ತವೆ. ಸುಳ್ಯದಲ್ಲಿ ಸಮಯ ಮುಗಿಯುತ್ತಿದ್ದಂತೆಯೇ ಪೊಲೀಸರು ಸೈರನ್ ಮೊಳಗಿಸುತ್ತಾರೆ. ಸಾರ್ವಜನಿಕರು ಮನೆಯಿಂದ ಒಬ್ಬರು ಮಾತ್ರವೇ ವಾರಕ್ಕೆ ಅಗತ್ಯಕ್ಕೆ ಬೇಕಾದಷ್ಟು ದಿನಸಿ ಸಾಮಾಗ್ರಿ ಕೊಂಡೊಯ್ಯ ಬಹುದುದಾಗಿದೆ. ಆದರೆ ಅದೇ ನೆಪದಲ್ಲಿ  ಪ್ರತೀ ದಿನವೂ ಪೇಟೆಗೆ ಬಂದರೆ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಹೀಗಾಗಿ ಸಾರ್ವಜನಿಕರು ಇದನ್ನು ಗಮನಿಸಿಕೊಳ್ಳಬೇಕಾಗಿದೆ.

 

ತರಕಾರಿ ಅಂಗಡಿಗಳ ಮುಂದೆ

 

 ಎಲ್ಲೆಲ್ಲೆ ಹೇಗಿತ್ತು ?

ಗ್ರಾಮೀಣ ಭಾಗದವರೆಗೂ ದಿನಸಿಯಲ್ಲಿ  ಕೊರತೆ ಕಂಡುಬರಲಿಲ್ಲ. ಪೂರೈಕೆಯಿತ್ತು. ಕೆಲವು ಕಡೆ ದಿನಸಿ ಸರಬರಾಜಿಗೆ ವ್ಯವಸ್ಥೆ ಮಾಡದ ಕಾರಣ  ದಿನಸಿ ವಸ್ತುಗಳ ಕೊರತೆ ಇತ್ತು. ದಿನಸಿ ಸಾಗಾಟಕ್ಕೆ ಅನುಮತಿ ಇದೆ. ಇದರ ವ್ಯವಸ್ಥೆಯಲ್ಲಿ  ಸ್ಥಳೀಯಾಡಳಿತದ ಜೊತೆ ಮಾತುಕತೆ ನಡೆಸಿ ಮಾಡಿಕೊಳ್ಳಬಹುದಾಗಿದೆ. ಸುಳ್ಯದಲ್ಲಿ ಜನ ಸಂದಣಿ ತಪ್ಪಿಸಲು 3 ವಿಭಾಗ ಮಾಡಿ ಬೆಳಗ್ಗೆ 6 ರಿಂದ 8 , 8 ರಿಂದ 10 ಹಾಗೂ 10 -12 ಗಂಟೆಯವರೆಗೆ ದಿನಸಿ ಖರೀದಿಗೆ ಪೊಲೀಸರು ಅವಕಾಶ ಮಾಡಕೊಟ್ಟಿದ್ದಾರೆ.

 

ಗ್ರಾಮೀಣ ಭಾಗದ ದಿನಸಿ ಅಂಗಡಿಗಳ ಮುಂದೆಯೂ ಮಾರ್ಕಿಂಗ್ ವ್ಯವಸ್ಥೆ

 

ಬಳ್ಪದ ಬೀದಿಗುಡ್ಡೆಯಲ್ಲಿ  ಮಿತ್ರ ಬಳಗದ  ಯುವಕರ ತಂಡ ಸಾರ್ವಜನಿಕರಿಗೆ ಅಗತ್ಯವಿದ್ದರೆ ದಿನಸಿ ಸಾಮಾಗ್ರಿಗಳ ಪೂರೈಕೆಗೆ ವ್ಯವಸ್ಥೆ ಮಾಡುತ್ತಿದೆ.  ಬಾಳಿಲದಲ್ಲಿ ಕಾರ್ಯಪಡೆ ಸದಸ್ಯರು ಅಂಗಡಿಗಳ ಮುಂದೆ ಜನರು ಅಂತರ ಕಾಪಾಡಿಕೊಳ್ಳಲು ಬೇಕಾದ ಮಾರ್ಕ್ ವ್ಯವಸ್ಥೆ ಮಾಡಿದ್ದಾರೆ. ಪಂಬೆತ್ತಾಡಿಯಲ್ಲಿ ಸಹಕಾರಿ ಸಂಘದ ನಿರ್ದೇಶಕರ ನೇತೃತ್ವದಲ್ಲಿ ತಮ್ಮ ಸ್ವಂತ  ವಾಹನದಲ್ಲಿ  ಜನರಿಗೆ ಅಗತ್ಯ ಸಾಮಾಗ್ರಿಗಳ ಸಾಗಾಟಕ್ಕೆ ಸಹಕರಿಸಿದರು.

ಸಂಪಾಜೆಯಲ್ಲಿ  ಬಿಗಿಬಂದೋಬಸ್ತ್ : ಜಿಲ್ಲಾ ಗಡಿಭಾಗವಾದ ಸಂಪಾಜೆಯಲ್ಲಿ ತಪಾಸಣೆ ಬಿಗುಗೊಳಿಸಲಾಗಿದೆ. ಯಾವುದೇ ಕಾರಣಕ್ಕೂ ಜಿಲ್ಲೆಯ ನಡುವೆ ಅನಗತ್ಯ ಓಡಾಟ ತಪ್ಪಿಸಲು ಕ್ರಮ ಕೈಗೊಳ್ಳಲಾಗಿದೆ.

ಲಾಕ್ ಡೌನ್ ನಡುವೆ ಚಾರಣ : ರಾಜ್ಯ ಮಾತ್ರವಲ್ಲ ದೇಶವೇ ಕೊರೋನಾ ವೈರಸ್ ಹರಡುವುದು  ತಡೆಯಲು ಇನ್ನಿಲ್ಲದ ಪ್ರಯತ್ನ ನಡೆಸುತ್ತಿರುವಾಗ ಪೆರಾಜೆಯ ಕೋಳಿಕ್ಕಮಲೆಗೆ ಚಾರಣಕ್ಕೆ ಆಗಮಿಸಿದವರನ್ನು ಅರಣ್ಯ ಇಲಾಖೆಯ ಸಿಬಂದಿಗಳು ವಶಕ್ಕೆ ಪಡೆದು ಮನೆಗೆ ಕಳುಹಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೈಸರ್ಗಿಕ ಕೃಷಿಯಿಂದ ರೈತರ ಆದಾಯ ಹೆಚ್ಚಳ

ಅಸ್ಸಾಂನಲ್ಲಿ ಐಸಿಎಆರ್–ಐಎಆರ್‌ಐ ಸಂಸ್ಥೆ “ನೈಸರ್ಗಿಕ ಕೃಷಿ” ವಿಷಯದಡಿ ಕಿಸಾನ್ ಮೇಳ 2026 ಆಯೋಜಿಸಿತು.…

58 minutes ago

ಭಾರತದಲ್ಲಿ ಮಳೆಗಾಲದ ತೀವ್ರತೆ ಹೆಚ್ಚಳ | ತಾಪಮಾನ ಏರಿಕೆಯಿಂದ ‘ಸೂಪರ್ ಚಾರ್ಜ್’ ಆಗುತ್ತಿರುವ ಮಾರುತ

ಜಾಗತಿಕ ತಾಪಮಾನ ಏರಿಕೆಯಿಂದ ಭಾರತದಲ್ಲಿ ಮಾರುತ ಮಳೆಯ ತೀವ್ರತೆ ಹೆಚ್ಚುತ್ತಿರುವುದು ಹೊಸ ಅಧ್ಯಯನದಲ್ಲಿ…

4 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರದ ಕಠಿಣ ಕ್ರಮ : 468 ಪ್ರಕರಣ ದಾಖಲು

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಕಳ್ಳಸಾಗಣೆ ವಿರುದ್ಧ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಬಿಗುಗೊಳಿಸಿದೆ.…

13 hours ago

ಸುಸ್ಥಿರ ಕೃಷಿ ಮತ್ತು ‘ತ್ಯಾಜ್ಯದಿಂದ ಸಂಪತ್ತು’ ಮಾದರಿಗೆ ಐಸಿಎಆರ್ ಸಭೆಯಲ್ಲಿ ಒತ್ತು

ಕೊಲ್ಕತ್ತಾದಲ್ಲಿ ನಡೆದ ಸಭೆಯಲ್ಲಿ ಸೆಣಬು ವಲಯ ಸುಧಾರಣೆ, ಸುಸ್ಥಿರ ಕೃಷಿ ಹಾಗೂ ಮೀನುಗಾರಿಕೆ…

14 hours ago

ಹೋಳಿ ಹಬ್ಬ: ಪ್ರಾಣಿ-ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಿ – ಮಂಡಳಿ ಮನವಿ

ಹೋಳಿ ಹಬ್ಬದ ಸಂದರ್ಭದಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ಹಾನಿಯಾಗದಂತೆ ಆಚರಿಸಲು ಭಾರತೀಯ ಪ್ರಾಣಿ…

14 hours ago

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

22 hours ago