ಸುಳ್ಯ:ಕೊರೊನಾ ವೈರಸ್ ದ ಕ ಜಿಲ್ಲೆ ಹಾಗೂ ಕಾಸರಗೋಡು ಪ್ರದೇಶದಲ್ಲಿ ಹರಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶನಿವಾರ ಸಂಪೂರ್ಣ ಬಂದ್ ಆಚರಿಸಲು ಜಿಲ್ಲಾಡಳಿತ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನಾದ್ಯಂತ ಎಲ್ಲಾ ಅಂಗಡಿಗಳು ಬಂದ್ ಆಗಿವೆ. ಪ್ರತೀ ಬಾರಿ ಹೇಳಿಯೂ ಅನಗತ್ಯವಾಗಿ ಪೇಟೆಗೆ ಬಂದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ಸುಳ್ಯ ಪೇಟೆ ಸಂಪೂರ್ಣ ಬಂದ್ ಆಗಿದ್ದು ಹಾಲಿನ ಅಂಗಡಿಗಳು ಬೆಳಗ್ಗೆ ತೆರೆದಿತ್ತು. ಕೆಲವು ಮೆಡಿಕಲ್ ತೆರೆದಿದೆ. ಆಸ್ಪತ್ರೆ ಚಿಕಿತ್ಸೆಗೆ ಲಭ್ಯವಿದೆ.
ಉಳಿದಂತೆ ಸಂಪಾಜೆ, ಬೆಳ್ಳಾರೆ, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು ಸೇರಿದಂತೆ ಗ್ರಾಮೀಣ ಭಾಗಗಳು ಬಂದ್ ಆಗಿವೆ. ಬಳ್ಪದಲ್ಲಿ ಬೆಳಗ್ಗೆ ಗುಂಪು ಸೇರಿದವರನ್ನು ಪೊಲೀಸರು ಚದುರಿಸಿದ್ದಾರೆ. ಗುತ್ತಿಗಾರಿನಲ್ಲಿ ಅನಗತ್ಯ ತಿರುಗಾಡಿದವರಿಗೆ ಪೊಲೀಸರು ಲಾಠಿ ಬೀಸಿದ್ದಾರೆ. ಬೆಳ್ಳಾರೆ, ಪಂಜದಲ್ಲೂ ಇದೇ ವಾತಾವರಣ ಕಂಡುಬಂದಿದೆ.
ಪಂಜ ಹಾಲು ಸಂಗ್ರಹಣಾ ಕೇಂದ್ರದಲ್ಲಿ ವಿವಿಧ ಸಹಕಾರಿ ಸಂಘದಿಂದ ಆಗಮಿಸುವ ಹಾಲು ಸೇರಿ ಸುಮಾರು 2500 ಲೀಟರ್ ಹಾಲು ಪ್ರತಿದಿನ ಸಂಗ್ರಹವಾಗುತ್ತದೆ. ಆದರೆ ಇದಕ್ಕೆ ಇಂದು ಅವಕಾಶ ಇರಲಿಲ್ಲ. ಕೆಲವು ಹೈನುಗಾರರು ಪ್ರತೀ ದಿನ 40-50 ಲೀಟರ್ ಹಾಲು ಸಂಘಕ್ಕೆ ಹಾಕುತ್ತಾರೆ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…