ಸುದ್ದಿಗಳು

#ಕೊರೊನಾ ಲಾಕ್ಡೌನ್ | ಸುಳ್ಯ ತಾಲೂಕು ಸಂಪೂರ್ಣ ಬಂದ್ | ಅನಗತ್ಯ ಪೇಟೆಗೆ ಬಂದವರಿಗೆ ಬಿಸಿ ಬಿಸಿ ಲಾಠಿ ರುಚಿ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ:ಕೊರೊನಾ ವೈರಸ್ ದ ಕ ಜಿಲ್ಲೆ ಹಾಗೂ ಕಾಸರಗೋಡು ಪ್ರದೇಶದಲ್ಲಿ  ಹರಡಿರುವ ಹಿನ್ನೆಲೆಯಲ್ಲಿ  ಮುಂಜಾಗ್ರತಾ ಕ್ರಮವಾಗಿ ಶನಿವಾರ ಸಂಪೂರ್ಣ ಬಂದ್ ಆಚರಿಸಲು ಜಿಲ್ಲಾಡಳಿತ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನಾದ್ಯಂತ ಎಲ್ಲಾ ಅಂಗಡಿಗಳು ಬಂದ್ ಆಗಿವೆ.  ಪ್ರತೀ ಬಾರಿ ಹೇಳಿಯೂ ಅನಗತ್ಯವಾಗಿ ಪೇಟೆಗೆ ಬಂದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.

Advertisement

ಸುಳ್ಯ ಪೇಟೆ ಸಂಪೂರ್ಣ ಬಂದ್ ಆಗಿದ್ದು  ಹಾಲಿನ ಅಂಗಡಿಗಳು ಬೆಳಗ್ಗೆ ತೆರೆದಿತ್ತು. ಕೆಲವು ಮೆಡಿಕಲ್ ತೆರೆದಿದೆ. ಆಸ್ಪತ್ರೆ ಚಿಕಿತ್ಸೆಗೆ ಲಭ್ಯವಿದೆ.

ಉಳಿದಂತೆ ಸಂಪಾಜೆ, ಬೆಳ್ಳಾರೆ, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು ಸೇರಿದಂತೆ ಗ್ರಾಮೀಣ ಭಾಗಗಳು ಬಂದ್ ಆಗಿವೆ. ಬಳ್ಪದಲ್ಲಿ ಬೆಳಗ್ಗೆ ಗುಂಪು ಸೇರಿದವರನ್ನು ಪೊಲೀಸರು ಚದುರಿಸಿದ್ದಾರೆ. ಗುತ್ತಿಗಾರಿನಲ್ಲಿ ಅನಗತ್ಯ ತಿರುಗಾಡಿದವರಿಗೆ ಪೊಲೀಸರು ಲಾಠಿ ಬೀಸಿದ್ದಾರೆ. ಬೆಳ್ಳಾರೆ, ಪಂಜದಲ್ಲೂ ಇದೇ ವಾತಾವರಣ ಕಂಡುಬಂದಿದೆ.

ಪಂಜ ಹಾಲು ಸಂಗ್ರಹಣಾ ಕೇಂದ್ರದಲ್ಲಿ ವಿವಿಧ ಸಹಕಾರಿ ಸಂಘದಿಂದ ಆಗಮಿಸುವ ಹಾಲು ಸೇರಿ ಸುಮಾರು 2500 ಲೀಟರ್ ಹಾಲು ಪ್ರತಿದಿನ ಸಂಗ್ರಹವಾಗುತ್ತದೆ.  ಆದರೆ ಇದಕ್ಕೆ ಇಂದು ಅವಕಾಶ ಇರಲಿಲ್ಲ. ಕೆಲವು ಹೈನುಗಾರರು ಪ್ರತೀ ದಿನ 40-50 ಲೀಟರ್ ಹಾಲು ಸಂಘಕ್ಕೆ ಹಾಕುತ್ತಾರೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆನೆ ದಾಳಿಗೆ ಮೂರು ವರ್ಷದಲ್ಲಿ 129 ರೈತರು ಬಲಿ | ವಿಧಾನಪರಿಷತ್‌ನಲ್ಲಿ ಮಾಹಿತಿ ನೀಡಿದ ಅರಣ್ಯ ಇಲಾಖೆ

ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…

15 minutes ago

ಹವಾಮಾನ ವರದಿ | 11-08-2025 | ಇಂದು ಸಾಮಾನ್ಯ ಮಳೆ | ಆ-12 ರಿಂದ ಆ-20 ರವರಗೆ ರಾಜ್ಯದ ವಿವಿದೆಡೆ ಮಳೆ |

ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…

7 hours ago

ವೈಜ್ಞಾನಿಕ ಶಿಫಾರಸ್ಸಿನಂತೆ ರಸಗೊಬ್ಬರದ ಬಳಕೆ ಸೂಕ್ತ – ರೈತರಿಗೆ ಸಲಹೆ

ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…

13 hours ago

ರಾಜ್ಯದ ಹಲವೆಡೆ ಮುಂದಿನ 7 ದಿನಗಳ ಕಾಲ ವ್ಯಾಪಕ ಮಳೆ | ಬೆಂಗಳೂರಿಗೆ ಎಲ್ಲೋ ಅಲರ್ಟ್

ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…

14 hours ago

ಬದುಕು ಪುರಾಣ | ಜ್ಞಾನದ ಪ್ರತಿನಿಧಿ ಗಂಗಾಪುತ್ರ

ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…

2 days ago

ಬೆಳೆ ಹಾನಿ ಕುರಿತು ಸಮಗ್ರವಾಗಿ ಸಮೀಕ್ಷೆಗೆ ಸೂಚನೆ

ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…

2 days ago