ಸುಳ್ಯ:ಕೊರೊನಾ ವೈರಸ್ ದ ಕ ಜಿಲ್ಲೆ ಹಾಗೂ ಕಾಸರಗೋಡು ಪ್ರದೇಶದಲ್ಲಿ ಹರಡಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶನಿವಾರ ಸಂಪೂರ್ಣ ಬಂದ್ ಆಚರಿಸಲು ಜಿಲ್ಲಾಡಳಿತ ಸೂಚನೆ ನೀಡಿತ್ತು. ಈ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನಾದ್ಯಂತ ಎಲ್ಲಾ ಅಂಗಡಿಗಳು ಬಂದ್ ಆಗಿವೆ. ಪ್ರತೀ ಬಾರಿ ಹೇಳಿಯೂ ಅನಗತ್ಯವಾಗಿ ಪೇಟೆಗೆ ಬಂದವರಿಗೆ ಪೊಲೀಸರು ಲಾಠಿ ರುಚಿ ತೋರಿಸಿದ್ದಾರೆ.
ಸುಳ್ಯ ಪೇಟೆ ಸಂಪೂರ್ಣ ಬಂದ್ ಆಗಿದ್ದು ಹಾಲಿನ ಅಂಗಡಿಗಳು ಬೆಳಗ್ಗೆ ತೆರೆದಿತ್ತು. ಕೆಲವು ಮೆಡಿಕಲ್ ತೆರೆದಿದೆ. ಆಸ್ಪತ್ರೆ ಚಿಕಿತ್ಸೆಗೆ ಲಭ್ಯವಿದೆ.
ಉಳಿದಂತೆ ಸಂಪಾಜೆ, ಬೆಳ್ಳಾರೆ, ಪಂಜ, ಸುಬ್ರಹ್ಮಣ್ಯ, ಗುತ್ತಿಗಾರು ಸೇರಿದಂತೆ ಗ್ರಾಮೀಣ ಭಾಗಗಳು ಬಂದ್ ಆಗಿವೆ. ಬಳ್ಪದಲ್ಲಿ ಬೆಳಗ್ಗೆ ಗುಂಪು ಸೇರಿದವರನ್ನು ಪೊಲೀಸರು ಚದುರಿಸಿದ್ದಾರೆ. ಗುತ್ತಿಗಾರಿನಲ್ಲಿ ಅನಗತ್ಯ ತಿರುಗಾಡಿದವರಿಗೆ ಪೊಲೀಸರು ಲಾಠಿ ಬೀಸಿದ್ದಾರೆ. ಬೆಳ್ಳಾರೆ, ಪಂಜದಲ್ಲೂ ಇದೇ ವಾತಾವರಣ ಕಂಡುಬಂದಿದೆ.
ಪಂಜ ಹಾಲು ಸಂಗ್ರಹಣಾ ಕೇಂದ್ರದಲ್ಲಿ ವಿವಿಧ ಸಹಕಾರಿ ಸಂಘದಿಂದ ಆಗಮಿಸುವ ಹಾಲು ಸೇರಿ ಸುಮಾರು 2500 ಲೀಟರ್ ಹಾಲು ಪ್ರತಿದಿನ ಸಂಗ್ರಹವಾಗುತ್ತದೆ. ಆದರೆ ಇದಕ್ಕೆ ಇಂದು ಅವಕಾಶ ಇರಲಿಲ್ಲ. ಕೆಲವು ಹೈನುಗಾರರು ಪ್ರತೀ ದಿನ 40-50 ಲೀಟರ್ ಹಾಲು ಸಂಘಕ್ಕೆ ಹಾಕುತ್ತಾರೆ.
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…
ಭಾರತದ ಅಧ್ಯಕ್ಷತೆಯಲ್ಲಿ ಬ್ರಿಕ್ಸ್ ರಾಷ್ಟ್ರಗಳು “ಇಂದೋರ್ ಘೋಷಣೆ” ಅಂಗೀಕರಿಸಿದ್ದು, ಆಹಾರ ಭದ್ರತೆ, ಡಿಜಿಟಲ್…
2026ರಲ್ಲಿ ಎಲ್ನಿನೊ ಅಧಿಕೃತವಾಗಿ ಆರಂಭಗೊಂಡಿದ್ದು, ಇದು ಅತ್ಯಂತ ಪ್ರಬಲ "ಸೂಪರ್ ಎಲ್ನಿನೊ" ಆಗುವ…
ಉತ್ತರ ಪ್ರದೇಶ ಸರ್ಕಾರವು ಭಾರತೀಯ ಸೇನೆಗೆ ದೇಶೀ ಹಸುವಿನ ಹಾಲಿನ ಉತ್ಪನ್ನಗಳನ್ನು ಪೂರೈಸಲು…
ಎಳೆಕಾಯಿ ಹಾಗೂ ಬಲಿತ ಅಡಿಕೆ ಒಡೆದು ಬೀಳುತ್ತಿರುವ ಸಮಸ್ಯೆ ಹಲವು ಭಾಗಗಳಲ್ಲಿ ಕಂಡುಬರುತ್ತಿದೆ.…