Advertisement
ಸುದ್ದಿಗಳು

ಕೊರೊನಾ ಲಾಕ್ಡೌನ್ | ಹೇರ್ ಕಟ್ಟಿಂಗ್ ಮಾಡಿಸಲಾಗದೆ ತಡಕಾಡುವ ಜನ | ಈಗ ಫೇಮಸ್ಸಾಗುತ್ತಿದೆ ಕೊರೊನಾ ಕಟ್ಟಿಂಗ್ |

Share

ಸುಳ್ಯ: ಕೊರೊನಾ ಲಾಕ್ಡೌನ್ ಇನ್ನೂ ಮುಂದುವರಿದಿದೆ. ಮೇ.3 ರವೆರೆಗೆ ಕೊರೊನಾ ಲಾಕ್ಡೌನ್ ಕಾರಣದಿಂದ ಅಗತ್ಯ ವಸ್ತುಗಳ ಸೇವೆ ಹೊರತುಪಡಿಸಿ ಇತರ ಅಂಗಡಿಗಳು ತೆರೆಯುವಂತಿಲ್ಲ. ಹೀಗಾಗಿ ಸೆಲೂನ್ ಅಂಗಡಿಗಳೂ ಬಂದ್. ಈ ಕಾರಣದಿಂದ ಜನರು ಹೇರ್ ಕಟ್ಟಿಂಗ್ ಮಾಡಿಸಲಾಗದೆ ತಡಕಾಡುತ್ತಿದ್ದಾರೆ. ಅನೇಕರು ತಾವೇ ಸ್ವತ: ಹೇರ್ ಕಟ್ಟಿಂಗ್ ಮಾಡಿಸಿ ಕೊರೊನಾ ಕಟ್ಟಿಂಗ್ ಎಂದು ಹೇಳಿಕೊಳ್ಳುತ್ತಿದ್ದಾರೆ. ಈ ನಡುವೆಯೂ ಸುಳ್ಯ ಸೇರಿದಂತೆ ಕೆಲವು ಕಡೆ ಬೆಳ್ಳಂಬೆಳಗ್ಗೆ ಕೆಲವು ಪ್ರಮುಖ ಅಂಗಡಿಗಳು ಅರ್ಧ ಬಾಗಿಲು ತೆರೆದು ಕೆಲವೇ ವ್ಯಕ್ತಿಗಳ ಹೇರ್ ಕಟ್ಟಿಂಗ್ ಗೆ ಅವಕಾಶ  ನೀಡುತ್ತಿದೆ ಎಂಬ ಮಾಹಿತಿ  ಇದೆ. ಇಂತಹ ಅವಕಾಶಗಳು ಗ್ರಾಮೀಣ ಭಾಗದವರೆಗೂ ಸಿಗಲಿ ಎಂದೂ ಒತ್ತಾಯ ಕೇಳಿಬಂದಿದೆ.

Advertisement
Advertisement
Advertisement
Advertisement
Advertisement

ಕೊರೊನಾ ವೈರಸ್ ಹರಡುವುದನ್ನು  ತಡೆಯಲು ಬ್ಯೂಟಿ ಪಾರ್ಲರ್, ಮೆನ್ಸ್ ಪಾರ್ಲರ್ ಸೇರಿದಂತೆ ಸೆಲೂನ್ ಗಳು ಬಂದ್ ಆಗಿದ್ದವು. ಇದ್ದಕ್ಕಿದ್ದಂತೆ ಬಂದ್ ಆದ ಪರಿಣಾಮ ಹೇರ್ ಕಟ್ಟಿಂಗ್ ಮಾಡಿಸಲಾಗದೇ ಉಳಿದವರು  ತಲೆ ಕೆಡಿಸಿಕೊಂಡಿದ್ದಾರೆ. ಇದೇ ಕಾರಣದಿಂದ ಹಲವರಿಗೆ ಶೀತ-ತಲೆನೋವು ಕಂಡುಬಂದು ಸ್ವತ: ಹೇರ್ ಕಟ್ಟಿಂಗ್ ಗೆ ಮುಂದಾದರು. ಇದಕ್ಕೆ ಕೊರೊನಾ ಕಟ್ಟಿಂಗ್ ಎಂದೂ ಹೆಸರಿಟ್ಟಿದ್ದಾರೆ. ಅಗತ್ಯ ಸೇವೆ ಇದು ಎಂದು ಮುಂಜಾಗ್ರತಾ ಕ್ರಮಗಳೊಂದಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಜನರು ಮಾಡಿದರೆ,  ವೃತ್ತಿಯವರಿಗೆ ಮುಂದಿನ ರಶ್ ಕಡಿಮೆ ಮಾಡಲು ಈಗಲೂ ಮುಂಜಾಗ್ರತಾ ಕ್ರಮಗಳೊಂದಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಇದೆ. ಈ ನಡುವೆ ಕೆಲವು ಕಡೆ ಬೆಳಗ್ಗೆ ಅಂಗಡಿಗಳು ಅರ್ಧ ಬಾಗಿಲಿನಿಂದ ಕೆಲಸ ಮಾಡುತ್ತವೆ ಎಂದೂ ಹೇಳಲಾಗುತ್ತದೆ. ಹೀಗಾಗಿ ಅವಕಾಶ ಇದ್ದರೆ ಎಲ್ಲಾ ಕಡೆಯೂ ಅವಕಾಶ ಸಿಗಬೇಕು ಎಂಬುದು ಇನ್ನೊಂದು ಒತ್ತಾಯ.

Advertisement

ಒಟ್ಟಿನಲ್ಲಿ ಕೊರೊನಾ ವೈರಸ್ ಈಗ ಹೇರ್ ಕಟ್ಟಿಂಗ್ ಗೂ ಸಂಕಷ್ಟ ತಂದಿಟ್ಟಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

1 day ago

ಬಿಸಿಗಾಳಿ ಪರಿಸ್ಥಿತಿಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ  ವರದಿಯ ಅನ್ವಯ, ಉತ್ತರ ಕನ್ನಡ…

2 days ago

ಹವಾಮಾನ ವರದಿ | 04-03-2025 | ಮಾ.8 ರವರೆಗೆ ಮಳೆ ಲಕ್ಷಣ ಇಲ್ಲ | ಬಿಸಿಲಿನ ವಾತಾವರಣ ಮುಂದುವರಿಕೆ |

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮೋಡ ಮಿಶ್ರಿತ ಬಿಸಿಲಿನ ವಾತಾವರಣದ ಮುನ್ಸೂಚನೆ…

2 days ago

ಹವಾಮಾನ ವರದಿ | 03-03-2025 | ಬಿಸಿಲಿನ ವಾತಾವರಣ ಮುಂದುವರಿಕೆ | ಮಾ.6 ರ ನಂತರ ಅಲ್ಲಲ್ಲಿ ತುಂತುರು ಮಳೆ ನಿರೀಕ್ಷೆ |

ಮಾರ್ಚ್ 6 ರಂದು ದಕ್ಷಿಣ ಕನ್ನಡ, ಮಲೆನಾಡು, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ…

3 days ago

ಚಿಕ್ಕಮಗಳೂರಿನ ಅರಣ್ಯದಲ್ಲಿ ಕಾಡ್ಗಿಚ್ಚು | 20 ಕ್ಕೂ ಹೆಚ್ಚು ಎಕರೆ ಅರಣ್ಯ ನಾಶ

ಒಂದು ತಿಂಗಳ ಅವಧಿಯಲ್ಲಿ ಚಾರ್ಮಾಡಿ ಘಾಟ್, ಬಿದಿರುತಳ, ಮುಳ್ಳಯ್ಯನಗಿರಿ ಸೇರಿ ಹಲವು ಅರಣ್ಯ…

3 days ago