Advertisement
ಸುದ್ದಿಗಳು

ಕೊರೊನಾ ಲಾಕ್ಡೌನ್ | ಹೇರ್ ಕಟ್ಟಿಂಗ್ ಮಾಡಿಸಲಾಗದೆ ತಡಕಾಡುವ ಜನ | ಈಗ ಫೇಮಸ್ಸಾಗುತ್ತಿದೆ ಕೊರೊನಾ ಕಟ್ಟಿಂಗ್ |

Share

ಸುಳ್ಯ: ಕೊರೊನಾ ಲಾಕ್ಡೌನ್ ಇನ್ನೂ ಮುಂದುವರಿದಿದೆ. ಮೇ.3 ರವೆರೆಗೆ ಕೊರೊನಾ ಲಾಕ್ಡೌನ್ ಕಾರಣದಿಂದ ಅಗತ್ಯ ವಸ್ತುಗಳ ಸೇವೆ ಹೊರತುಪಡಿಸಿ ಇತರ ಅಂಗಡಿಗಳು ತೆರೆಯುವಂತಿಲ್ಲ. ಹೀಗಾಗಿ ಸೆಲೂನ್ ಅಂಗಡಿಗಳೂ ಬಂದ್. ಈ ಕಾರಣದಿಂದ ಜನರು ಹೇರ್ ಕಟ್ಟಿಂಗ್ ಮಾಡಿಸಲಾಗದೆ ತಡಕಾಡುತ್ತಿದ್ದಾರೆ. ಅನೇಕರು ತಾವೇ ಸ್ವತ: ಹೇರ್ ಕಟ್ಟಿಂಗ್ ಮಾಡಿಸಿ ಕೊರೊನಾ ಕಟ್ಟಿಂಗ್ ಎಂದು ಹೇಳಿಕೊಳ್ಳುತ್ತಿದ್ದಾರೆ. ಈ ನಡುವೆಯೂ ಸುಳ್ಯ ಸೇರಿದಂತೆ ಕೆಲವು ಕಡೆ ಬೆಳ್ಳಂಬೆಳಗ್ಗೆ ಕೆಲವು ಪ್ರಮುಖ ಅಂಗಡಿಗಳು ಅರ್ಧ ಬಾಗಿಲು ತೆರೆದು ಕೆಲವೇ ವ್ಯಕ್ತಿಗಳ ಹೇರ್ ಕಟ್ಟಿಂಗ್ ಗೆ ಅವಕಾಶ  ನೀಡುತ್ತಿದೆ ಎಂಬ ಮಾಹಿತಿ  ಇದೆ. ಇಂತಹ ಅವಕಾಶಗಳು ಗ್ರಾಮೀಣ ಭಾಗದವರೆಗೂ ಸಿಗಲಿ ಎಂದೂ ಒತ್ತಾಯ ಕೇಳಿಬಂದಿದೆ.

ಕೊರೊನಾ ವೈರಸ್ ಹರಡುವುದನ್ನು  ತಡೆಯಲು ಬ್ಯೂಟಿ ಪಾರ್ಲರ್, ಮೆನ್ಸ್ ಪಾರ್ಲರ್ ಸೇರಿದಂತೆ ಸೆಲೂನ್ ಗಳು ಬಂದ್ ಆಗಿದ್ದವು. ಇದ್ದಕ್ಕಿದ್ದಂತೆ ಬಂದ್ ಆದ ಪರಿಣಾಮ ಹೇರ್ ಕಟ್ಟಿಂಗ್ ಮಾಡಿಸಲಾಗದೇ ಉಳಿದವರು  ತಲೆ ಕೆಡಿಸಿಕೊಂಡಿದ್ದಾರೆ. ಇದೇ ಕಾರಣದಿಂದ ಹಲವರಿಗೆ ಶೀತ-ತಲೆನೋವು ಕಂಡುಬಂದು ಸ್ವತ: ಹೇರ್ ಕಟ್ಟಿಂಗ್ ಗೆ ಮುಂದಾದರು. ಇದಕ್ಕೆ ಕೊರೊನಾ ಕಟ್ಟಿಂಗ್ ಎಂದೂ ಹೆಸರಿಟ್ಟಿದ್ದಾರೆ. ಅಗತ್ಯ ಸೇವೆ ಇದು ಎಂದು ಮುಂಜಾಗ್ರತಾ ಕ್ರಮಗಳೊಂದಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಜನರು ಮಾಡಿದರೆ,  ವೃತ್ತಿಯವರಿಗೆ ಮುಂದಿನ ರಶ್ ಕಡಿಮೆ ಮಾಡಲು ಈಗಲೂ ಮುಂಜಾಗ್ರತಾ ಕ್ರಮಗಳೊಂದಿಗೆ ಅವಕಾಶ ನೀಡಬೇಕು ಎಂಬ ಒತ್ತಾಯ ಇದೆ. ಈ ನಡುವೆ ಕೆಲವು ಕಡೆ ಬೆಳಗ್ಗೆ ಅಂಗಡಿಗಳು ಅರ್ಧ ಬಾಗಿಲಿನಿಂದ ಕೆಲಸ ಮಾಡುತ್ತವೆ ಎಂದೂ ಹೇಳಲಾಗುತ್ತದೆ. ಹೀಗಾಗಿ ಅವಕಾಶ ಇದ್ದರೆ ಎಲ್ಲಾ ಕಡೆಯೂ ಅವಕಾಶ ಸಿಗಬೇಕು ಎಂಬುದು ಇನ್ನೊಂದು ಒತ್ತಾಯ.

ಒಟ್ಟಿನಲ್ಲಿ ಕೊರೊನಾ ವೈರಸ್ ಈಗ ಹೇರ್ ಕಟ್ಟಿಂಗ್ ಗೂ ಸಂಕಷ್ಟ ತಂದಿಟ್ಟಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

10 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

14 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago