Advertisement
MIRROR FOCUS

ಕೊರೊನಾ ವೈರಸ್: ಆತಂಕ‌ ಬೇಡ, ಜಾಗ್ರತೆ ಇರಲಿ – ಸಚಿವ ಕೋಟ

Share

ಮಂಗಳೂರು: ಚೀನಾ ಸೇರಿದಂತೆ ಕೆಲವು ರಾಷ್ಟ್ರಗಳಲ್ಲಿ ಕೊರೋನಾ ವೈರಸ್ ರೋಗ ಹಬ್ಬಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಸಾರ್ವಜನಿಕರು ಯಾವುದೇ ಭಯ, ಆತಂಕಕ್ಕೊಳಗಾಗುವ ಅಗತ್ಯವಿಲ್ಲ. ಆದರೆ, ಮುಂಜಾಗರೂಕತಾ ಕ್ರಮಗಳನ್ನು ಅಳವಡಿಸಿಕೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದ್ದಾರೆ.

ಅವರು ಬುಧವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಈ ಸಂಬಂಧ ತುರ್ತು ಸಭೆ ನಡೆಸಿ, ರಾಜ್ಯದಲ್ಲಿ ಈ ರೋಗದಿಂದ ಬಾಧಿತರಾದ ಯಾವುದೇ ಮಾಹಿತಿ ಇದುವರೆಗೆ ಇಲ್ಲ. ಆದರೂ, ದ.ಕ. ಜಿಲ್ಲೆಯ ಪಕ್ಕದ ಕೇರಳ ರಾಜ್ಯದಲ್ಲಿ ಇದು ಕಂಡು ಬಂದಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿಯೂ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದರು.
ಸಾರ್ವಜನಿಕರು ಯಾವುದೇ ಸಂಶಯ,ಮಾಹಿತಿ‌ ಹಾಗೂ ನೆರವಿಗೆ ಆರೋಗ್ಯ ಇಲಾಖೆಯ ಸಹಾಯವಾಣಿ 104 ಕ್ಕೆ ಕರೆ ಮಾಡಬಹುದು. ಜಿಲ್ಲಾಡಳಿತವು ಸಂಪೂರ್ಣ ಸನ್ನದ್ಧವಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಮಾತನಾಡಿ, ಜಿಲ್ಲೆಗೆ ಪ್ರಮುಖ ಪ್ರವೇಶ ಸ್ಥಳವಾಗಿರುವ ಏರ್ ಪೋಟ್೯, ರೈಲು ನಿಲ್ದಾಣಗಳಲ್ಲಿ ವಿಶೇಷವಾಗಿ ಅಂತಾರಾಷ್ಟ್ರೀಯ ಪ್ರಯಾಣಿಕರ ಆರೋಗ್ಯ ತಪಾಸಣೆಗೆ ವ್ಯವಸ್ಥೆ ಮಾಡಲಾಗಿದೆ. ಚೀನಾದಿಂದ ಮಂಗಳೂರಿಗೆ ನೇರ ವಿಮಾನ ಯಾನ ಇಲ್ಲದೇ ಇರುವುದರಿಂದ ಕೊರೋನಾ ವೈರಸ್ ಹಂಚಿಕೆ ಬಗ್ಗೆ ಆತಂಕವಿಲ್ಲ. ಆದಾಗ್ಯೂ ವಿಶೇಷವಾಗಿ ಕೆಲ ದಿನ ಹಿಂದೆ ಚೀನಾದಿಂದ ಜಿಲ್ಲೆಗೆ ಬಂದ ಇಬ್ಬರ ಆರೋಗ್ಯ ತಪಾಸಣೆ ಮಾಡಲಾಗಿದ್ದು, ಯಾವುದೇ ರೋಗ ಲಕ್ಷಣ ಅವರಲ್ಲಿ ಕಂಡುಬಂದಿರುವುದಿಲ್ಲ ಎಂದು ಅವರು ಹೇಳಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ರಾಮಕೃಷ್ಣ ರಾವ್ ಮಾತನಾಡಿ, ವೆನ್ ಲಾಕ್ ಆಸ್ಪತ್ರೆಯಲ್ಲಿ ಕೊರೋನಾ ವೈರಸ್ ಚಿಕಿತ್ಸೆಗಾಗಿ 10 ವಿಶೇಷ ಹಾಸಿಗೆ ಸಿದ್ಧ‌ತೆಯಲ್ಲಿಡಲಾಗಿದೆ. ದಿನದ 24 ಗಂಟೆಯೂ ಇದರ ನಿರ್ವಹಣೆಗೆ ವೈದ್ಯರಿಗೆ, ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ ಎಂದರು.
ವಿಶ್ವ ಆರೋಗ್ಯ ಸಂಸ್ಥೆಯ ಡಾ. ಸತೀಶ್ಚಂದ್ರ ಮಾತನಾಡಿ, ಕೈಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಹಾಗೂ ಸೀನುವಾಗ ಕರವಸ್ತ್ರ ಹಿಡಿದಿಕೊಳ್ಳುವುದು ಈ ರೋಗ ನಿಯಂತ್ರಣದಲ್ಲಿ ಪ್ರಾಮುಖ್ಯ ವಾಗಿದೆ ಎಂದರು.

ಸಭೆಯಲ್ಲಿ ಜಿ.ಪಂ. ಮುಖ್ಯ ಯೋಜನಾಧಿಕಾರಿ ಸಂಧ್ಯಾ, ಡಾ. ನವೀನ್ ಚಂದ್ರ, ಡಾ. ರಾಜೇಶ್, ವಿವಿಧ ಇಲಾಖಾಧಿಕಾರಿಗಳು, ಏರ್ ಪೋಟ್೯, ರೈಲ್ವೇ, ಎನ್.ಎಂ.ಪಿ.ಟ. ಅಧಿಕಾರಿಗಳು ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 14-09-2026 | ಸೆ.18ರ ಬಳಿಕ ಮಳೆ ಚಿತ್ರಣ ಬದಲಾಗಬಹುದೇ?

ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…

21 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಮೂಲಕ ಅರಳಿದ ಗಣೇಶ

ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…

22 hours ago

ನನ್ನ ಚಿತ್ರ-ನನ್ನ ಖುಷಿ | ಬಣ್ಣಗಳ ಲೋಕದಲ್ಲಿ ಪುಟ್ಟ ಮನಸ್ಸಿನ ಖುಷಿ

ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…

23 hours ago

ವಿಘ್ನಗಳ ಆಚೆ ಕಾಣುವ ಗಣೇಶತತ್ತ್ವ

ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…

1 day ago

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ

ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್‌ನಲ್ಲಿ…

2 days ago