ಮಂಗಳೂರು ಮಾ.22 ರಿಂದ ದ ಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವುದು ತಡೆಯಲು ಕರ್ಫ್ಯೂ ಇರುವುದರಿಂದ ಪ್ರತಿ ನಿತ್ಯ 1 ಲಕ್ಷ ಲೀಟರ್ ಹಾಲು ಮಾರಾಟ ಕಡಿಮೆಯಾಗಿದೆ. ಹಾಲನ್ನು ಪರಿವರ್ತನಾ ಘಟಕಗಳಿಗೆ ಕಳುಹಿಸಿದ್ದು, ಅಲ್ಲಿಯೂ ಸಹ ಸಾಮರ್ಥ್ಯ ಮೀರಿ ಹಾಲಿನ ದಾಸ್ತಾನು ಇರುವುದರಿಂದ ತಕ್ಷಣ ಪರಿವರ್ತನೆ ಮಾಡಲು ಸಾಧ್ಯವಾಗಿರುವುದಿಲ್ಲ. ಆದುದರಿಂದ ಒಕ್ಕೂಟವು ಸಂಘಗಳಿಂದ ಹಾಲನ್ನು ಸ್ವೀಕರಿಸಿ ದಾಸ್ತಾನಿಡಲು ಸಾಧ್ಯವಾಗುತ್ತಿಲ್ಲ.ಹೀಗಾಗಿ ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಮಾ.29 ಹಾಗೂ 30 ರಂದು ಹಾಲು ಸಂಗ್ರಹಣೆಯನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ನಿತ್ಯದಂತೆ ಮುಂದುವರಿಯಲಿದೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ರವಿರಾಜ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋವಿಡ್ 19 ವೈರಸ್ ಹರಡುವ ಭೀತಿಯಿಂದ ಜನರು ಜೀವ ಭಯದಿಂದ ದಿನದೂಡುವಂತಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೂ ನಂದಿನಿ ಬಳಗದ ಎಲ್ಲರೂ ಗ್ರಾಹಕರಿಗೆ ಹಾಲು ಪೂರೈಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಮಾ.27 ರಿಂದ ಮಾಧ್ಯಮಗಳಲ್ಲಿ ಅಗತ್ಯ ಸೇವೆ ಒಳಗೊಂಡು ದಕ್ಷಿಣ ಕನ್ನಡ ಜಿಲ್ಲೆಯು ಸಂಪೂರ್ಣ ಬಂದ್ ಎಂದು ವರದಿ ಬಿತ್ತರವಾದ ಹಾಗೂ ಪೋಲಿಸ್ ಇಲಾಖೆಯಿಂದ ಅಂಗಡಿ ಮುಂಗಟ್ಟುಗಳನ್ನು ಕಟ್ಟುನಿಟ್ಟಾಗಿ ತೆರೆಯದಂತೆ ಆದೇಶಿಸಿದ ಹಿನ್ನೆಲೆಯಲ್ಲಿ ನಮ್ಮ ಡೀಲರುಗಳ ಹಾಲು ಮಾರಾಟಕ್ಕೆ ತೊಂದರೆಯಾಗಿ ಮಾ.28 ರಂದು ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಸಂಪೂರ್ಣ ಸ್ಥಗಿತಗೊಂಡಿರುತ್ತದೆ.
ಈ ಸಂದರ್ಭದಲ್ಲಿ ಮಾನ್ಯ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತವನ್ನು ಒಕ್ಕೂಟದ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಸಂಪರ್ಕಿಸಿ ಪರಿಸ್ಥಿತಿ ವಿವರಿಸಿ ಮಾ.29 ರಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನಿಗದಿತ ಸಮಯದಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಿರುತ್ತಾರೆ.
ಆದರೆ ಈಗಾಗಲೇ ಹಾಲು ದಾಸ್ತಾನು ಇರುವುದರಿಂದ ಪ್ರಸ್ತುತದ ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಅನಿವಾರ್ಯವಾಗಿ ಮಾ.29 ಹಾಗೂ 30 ರಂದು ಹಾಲು ಸಂಗ್ರಹಣೆಯನ್ನು ಸ್ಥಗಿತಗೊಳಿಸಲಾಗಿದೆ. ಹೈನುಗಾರರು ಸಹಕರಿಸುವಂತೆ ರವಿರಾಜ ಹೆಗ್ಡೆಯವರು ಮನವಿ ಮಾಡಿದ್ದಾರೆ.
ಮಾ.31 ರಿಂದ ಗುಣಮಟ್ಟದ ಹಾಲು ಸಂಗ್ರಹಣೆ ಪುನ:ರಾರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…
ರಾಜ್ಯದಲ್ಲಿ ನೈರುತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ತೀವ್ರವಾಗಿದ್ದು, ದಕ್ಷಿಣ ಒಳನಾಡಿನಲ್ಲಿ ಸಕ್ರಿಯವಾಗಿದ್ದು, ಕರಾವಳಿಯಲ್ಲಿ…
ಹಾವೇರಿ ಜಿಲ್ಲೆಯಲ್ಲಿರುವ ಅನಕ್ಷರಸ್ಥರನ್ನು ಅಕ್ಷರಸ್ಥರನ್ನಾಗಿ ಮಾಡಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದ್ದು, ಸಾಕ್ಷರತಾ ಕಾರ್ಯಕ್ರಮದಡಿ ಜಿಲ್ಲೆಯ…
ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳೀಯು ಪಶ್ಚಿಮಾಭಿಮುಖವಾಗಿ ಚಲಿಸುತ್ತಿದ್ದು, ಇದೇ ಸಂದರ್ಭದಲ್ಲಿ ಬಂಗಾಳಕೊಲ್ಲಿಯಲ್ಲೂ ಸಣ್ಣ…
ಭಾರತದಲ್ಲಿ ಉತ್ಪಾದನೆ ಆಗುತ್ತಿರುವ ಒಟ್ಟು ಅಡಿಕೆಯ ಪ್ರಮಾಣ ಸುಮಾರು ಹದಿನಾರು ಲಕ್ಷ ಟನ್,…
1,486 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಚೆನಾಬ್ ಸೇತುವೆಯನ್ನು ಸರ್ಕಾರವು "ಇತ್ತೀಚಿನ ಇತಿಹಾಸದಲ್ಲಿ…