Advertisement
ಸುದ್ದಿಗಳು

ಕೊರೊನಾ ವೈರಸ್ ಇಫೆಕ್ಟ್ | ಹಾಲು ಮಾರಾಟದಲ್ಲಿ ವ್ಯತ್ಯಯ | ವಿಪರೀತ ದಾಸ್ತಾನು | ಮಾ.30 ರವರೆಗೆ ಹಾಲು ಸಂಗ್ರಹ ಸ್ಥಗಿತ | ಮಾರಾಟ ಯಥಾಸ್ಥಿತಿ | ಕೆ ಎಂ ಎಫ್ ಹೇಳಿಕೆ|

Share

ಮಂಗಳೂರು ಮಾ.22 ರಿಂದ ದ ಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವುದು  ತಡೆಯಲು ಕರ್ಫ್ಯೂ ಇರುವುದರಿಂದ  ಪ್ರತಿ ನಿತ್ಯ 1  ಲಕ್ಷ ಲೀಟರ್ ಹಾಲು ಮಾರಾಟ ಕಡಿಮೆಯಾಗಿದೆ. ಹಾಲನ್ನು ಪರಿವರ್ತನಾ ಘಟಕಗಳಿಗೆ ಕಳುಹಿಸಿದ್ದು, ಅಲ್ಲಿಯೂ ಸಹ ಸಾಮರ್ಥ್ಯ  ಮೀರಿ ಹಾಲಿನ ದಾಸ್ತಾನು ಇರುವುದರಿಂದ ತಕ್ಷಣ ಪರಿವರ್ತನೆ ಮಾಡಲು ಸಾಧ್ಯವಾಗಿರುವುದಿಲ್ಲ.  ಆದುದರಿಂದ ಒಕ್ಕೂಟವು ಸಂಘಗಳಿಂದ ಹಾಲನ್ನು ಸ್ವೀಕರಿಸಿ ದಾಸ್ತಾನಿಡಲು ಸಾಧ್ಯವಾಗುತ್ತಿಲ್ಲ.ಹೀಗಾಗಿ ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಮಾ.29 ಹಾಗೂ 30 ರಂದು ಹಾಲು ಸಂಗ್ರಹಣೆಯನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ನಿತ್ಯದಂತೆ ಮುಂದುವರಿಯಲಿದೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ  ರವಿರಾಜ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋವಿಡ್ 19 ವೈರಸ್ ಹರಡುವ ಭೀತಿಯಿಂದ ಜನರು ಜೀವ ಭಯದಿಂದ ದಿನದೂಡುವಂತಾಗಿದೆ. ಇಂತಹ  ಪರಿಸ್ಥಿತಿಯಲ್ಲಿಯೂ  ನಂದಿನಿ ಬಳಗದ ಎಲ್ಲರೂ ಗ್ರಾಹಕರಿಗೆ ಹಾಲು ಪೂರೈಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಮಾ.27 ರಿಂದ  ಮಾಧ್ಯಮಗಳಲ್ಲಿ ಅಗತ್ಯ ಸೇವೆ ಒಳಗೊಂಡು ದಕ್ಷಿಣ ಕನ್ನಡ ಜಿಲ್ಲೆಯು ಸಂಪೂರ್ಣ ಬಂದ್ ಎಂದು ವರದಿ ಬಿತ್ತರವಾದ ಹಾಗೂ ಪೋಲಿಸ್ ಇಲಾಖೆಯಿಂದ ಅಂಗಡಿ ಮುಂಗಟ್ಟುಗಳನ್ನು ಕಟ್ಟುನಿಟ್ಟಾಗಿ ತೆರೆಯದಂತೆ ಆದೇಶಿಸಿದ ಹಿನ್ನೆಲೆಯಲ್ಲಿ ನಮ್ಮ ಡೀಲರುಗಳ ಹಾಲು ಮಾರಾಟಕ್ಕೆ ತೊಂದರೆಯಾಗಿ ಮಾ.28 ರಂದು ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಸಂಪೂರ್ಣ ಸ್ಥಗಿತಗೊಂಡಿರುತ್ತದೆ.

ಈ ಸಂದರ್ಭದಲ್ಲಿ ಮಾನ್ಯ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತವನ್ನು ಒಕ್ಕೂಟದ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಸಂಪರ್ಕಿಸಿ ಪರಿಸ್ಥಿತಿ ವಿವರಿಸಿ ಮಾ.29  ರಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನಿಗದಿತ ಸಮಯದಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಿರುತ್ತಾರೆ.

ಆದರೆ ಈಗಾಗಲೇ ಹಾಲು ದಾಸ್ತಾನು ಇರುವುದರಿಂದ ಪ್ರಸ್ತುತದ ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಅನಿವಾರ್ಯವಾಗಿ ಮಾ.29 ಹಾಗೂ 30 ರಂದು ಹಾಲು ಸಂಗ್ರಹಣೆಯನ್ನು ಸ್ಥಗಿತಗೊಳಿಸಲಾಗಿದೆ. ಹೈನುಗಾರರು ಸಹಕರಿಸುವಂತೆ ರವಿರಾಜ ಹೆಗ್ಡೆಯವರು ಮನವಿ ಮಾಡಿದ್ದಾರೆ.

ಮಾ.31 ರಿಂದ ಗುಣಮಟ್ಟದ ಹಾಲು ಸಂಗ್ರಹಣೆ ಪುನ:ರಾರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-09-2026 | ಕರ್ನಾಟಕದಲ್ಲಿ ಇಂದಿನಿಂದ ಮಳೆ ಚುರುಕು ಸಾಧ್ಯತೆ

ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…

4 hours ago

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

11 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

19 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

21 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

1 day ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

1 day ago