Advertisement
ಸುದ್ದಿಗಳು

ಕೊರೊನಾ ವೈರಸ್ ಇಫೆಕ್ಟ್ | ಹಾಲು ಮಾರಾಟದಲ್ಲಿ ವ್ಯತ್ಯಯ | ವಿಪರೀತ ದಾಸ್ತಾನು | ಮಾ.30 ರವರೆಗೆ ಹಾಲು ಸಂಗ್ರಹ ಸ್ಥಗಿತ | ಮಾರಾಟ ಯಥಾಸ್ಥಿತಿ | ಕೆ ಎಂ ಎಫ್ ಹೇಳಿಕೆ|

Share

ಮಂಗಳೂರು ಮಾ.22 ರಿಂದ ದ ಕ ಜಿಲ್ಲೆಯಲ್ಲಿ ಕೊರೊನಾ ವೈರಸ್ ಹರಡುವುದು  ತಡೆಯಲು ಕರ್ಫ್ಯೂ ಇರುವುದರಿಂದ  ಪ್ರತಿ ನಿತ್ಯ 1  ಲಕ್ಷ ಲೀಟರ್ ಹಾಲು ಮಾರಾಟ ಕಡಿಮೆಯಾಗಿದೆ. ಹಾಲನ್ನು ಪರಿವರ್ತನಾ ಘಟಕಗಳಿಗೆ ಕಳುಹಿಸಿದ್ದು, ಅಲ್ಲಿಯೂ ಸಹ ಸಾಮರ್ಥ್ಯ  ಮೀರಿ ಹಾಲಿನ ದಾಸ್ತಾನು ಇರುವುದರಿಂದ ತಕ್ಷಣ ಪರಿವರ್ತನೆ ಮಾಡಲು ಸಾಧ್ಯವಾಗಿರುವುದಿಲ್ಲ.  ಆದುದರಿಂದ ಒಕ್ಕೂಟವು ಸಂಘಗಳಿಂದ ಹಾಲನ್ನು ಸ್ವೀಕರಿಸಿ ದಾಸ್ತಾನಿಡಲು ಸಾಧ್ಯವಾಗುತ್ತಿಲ್ಲ.ಹೀಗಾಗಿ ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಮಾ.29 ಹಾಗೂ 30 ರಂದು ಹಾಲು ಸಂಗ್ರಹಣೆಯನ್ನು ಸ್ಥಗಿತಗೊಳಿಸಲಾಗಿದೆ. ಆದರೆ, ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ನಿತ್ಯದಂತೆ ಮುಂದುವರಿಯಲಿದೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ  ರವಿರಾಜ ಹೆಗ್ಡೆ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೋವಿಡ್ 19 ವೈರಸ್ ಹರಡುವ ಭೀತಿಯಿಂದ ಜನರು ಜೀವ ಭಯದಿಂದ ದಿನದೂಡುವಂತಾಗಿದೆ. ಇಂತಹ  ಪರಿಸ್ಥಿತಿಯಲ್ಲಿಯೂ  ನಂದಿನಿ ಬಳಗದ ಎಲ್ಲರೂ ಗ್ರಾಹಕರಿಗೆ ಹಾಲು ಪೂರೈಸುವ ಮೂಲಕ ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಮಾ.27 ರಿಂದ  ಮಾಧ್ಯಮಗಳಲ್ಲಿ ಅಗತ್ಯ ಸೇವೆ ಒಳಗೊಂಡು ದಕ್ಷಿಣ ಕನ್ನಡ ಜಿಲ್ಲೆಯು ಸಂಪೂರ್ಣ ಬಂದ್ ಎಂದು ವರದಿ ಬಿತ್ತರವಾದ ಹಾಗೂ ಪೋಲಿಸ್ ಇಲಾಖೆಯಿಂದ ಅಂಗಡಿ ಮುಂಗಟ್ಟುಗಳನ್ನು ಕಟ್ಟುನಿಟ್ಟಾಗಿ ತೆರೆಯದಂತೆ ಆದೇಶಿಸಿದ ಹಿನ್ನೆಲೆಯಲ್ಲಿ ನಮ್ಮ ಡೀಲರುಗಳ ಹಾಲು ಮಾರಾಟಕ್ಕೆ ತೊಂದರೆಯಾಗಿ ಮಾ.28 ರಂದು ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಸಂಪೂರ್ಣ ಸ್ಥಗಿತಗೊಂಡಿರುತ್ತದೆ.

ಈ ಸಂದರ್ಭದಲ್ಲಿ ಮಾನ್ಯ ಉಸ್ತುವಾರಿ ಸಚಿವರು ಮತ್ತು ಜಿಲ್ಲಾಡಳಿತವನ್ನು ಒಕ್ಕೂಟದ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು ಸಂಪರ್ಕಿಸಿ ಪರಿಸ್ಥಿತಿ ವಿವರಿಸಿ ಮಾ.29  ರಿಂದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ನಿಗದಿತ ಸಮಯದಲ್ಲಿ ಮಾರಾಟ ಮಾಡಲು ಅವಕಾಶ ಕಲ್ಪಿಸಿರುತ್ತಾರೆ.

ಆದರೆ ಈಗಾಗಲೇ ಹಾಲು ದಾಸ್ತಾನು ಇರುವುದರಿಂದ ಪ್ರಸ್ತುತದ ಪರಿಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಅನಿವಾರ್ಯವಾಗಿ ಮಾ.29 ಹಾಗೂ 30 ರಂದು ಹಾಲು ಸಂಗ್ರಹಣೆಯನ್ನು ಸ್ಥಗಿತಗೊಳಿಸಲಾಗಿದೆ. ಹೈನುಗಾರರು ಸಹಕರಿಸುವಂತೆ ರವಿರಾಜ ಹೆಗ್ಡೆಯವರು ಮನವಿ ಮಾಡಿದ್ದಾರೆ.

ಮಾ.31 ರಿಂದ ಗುಣಮಟ್ಟದ ಹಾಲು ಸಂಗ್ರಹಣೆ ಪುನ:ರಾರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

19 minutes ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

2 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

2 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

11 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

14 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

21 hours ago